Homeಮುಖಪುಟಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾದ ವೈದ್ಯ ಕಫೀಲ್ ಖಾನ್ ತಾವು ಯಾವುದೇ ಪಕ್ಷ ಸೇರುವುದಿಲ್ಲ ಎಂದಿದ್ದಾರೆ. ಬಿಡುಗಡೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಉಹಾಪೋಹಗಳನ್ನು ತಳ್ಳಿಹಾಕಿರುವ ಅವರು ನಾನು ವೈದ್ಯ, ವೈದ್ಯಾನಾಗಿಯೇ ಇರಲು ಬಯಸುತ್ತೇನೆ ಎಂದಿದ್ದಾರೆ.

ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಆದೇಶಿಸಿತ್ತು. ನಂತರ ಅವರನ್ನು ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

ಪ್ರಸ್ತುತ ರಾಜಸ್ತಾನದಲ್ಲಿರುವ ಡಾ. ಖಾನ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಪಿಟಿಐ ತಿಳಿಸಿದೆ. “ನಾನು ವೈದ್ಯನಾಗಿದ್ದೇನೆ ಮತ್ತು ಅದೇ ರೀತಿ ಇರಲು ಬಯಸುತ್ತೇನೆ” ಎಂದ ಅವರು ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಹಾಯ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

“ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮತ್ತು ಮಥುರಾದಿಂದ ಭರತ್‌ಪುರಕ್ಕೆ ಇರುವ ದೂರ ಕೇವಲ 20 ನಿಮಿಷಗಳಾದ್ದರಿಂದ, ಪ್ರಿಯಾಂಕಾ ಗಾಂಧಿ ನನಗೆ ಭರತ್‌ಪುರಕ್ಕೆ ಬರಲು ಹೇಳಿದ್ದರು. ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

ಸೆ.1 ರಂದು ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ ಅವರ ಬಿಡುಗಡೆ ವಿಳಂಬವಾದಾಗ, ಉತ್ತರಪ್ರದೇಶ ಸರ್ಕಾರವು ಮತ್ತೆ ಒಂದು ಪ್ರಕರಣದಲ್ಲಿ ಸಿಲುಕಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಆತಂಕವಿತ್ತು ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಆ ಆತಂಕದಲ್ಲಿದ್ದಾಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾನವೀಯ ನೆಲೆಯಲ್ಲಿ ನನಗೆ ಸಹಾಯ ಮಾಡಿದ್ದಾರೆ. ಆದರೆ ಅಷ್ಟಕ್ಕೆ ಕಾಂಗ್ರೆಸ್ ಪಕ್ಷ ಸೇರಲು ಹೊರಟ್ಟಿದ್ದಾರೆ ಎಂದು ನಿರ್ಣಯಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಈ ನಡುವೆ ಡಾ. ಕಫೀಲ್ ಖಾನ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಗೋರಖ್‌ಪುರದ ವೈದ್ಯಕೀಯ ಕಾಲೇಜಿನಲ್ಲಿ ತಮ್ಮ ಹುದ್ದೆಗೆ ಪುನಃ ನೇಮಕ ಮಾಡುವಂತೆ, ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಶಿಶುವೈದ್ಯರಾಗಿ ಕೆಲಸ ಮಾಡುತ್ತಿದ್ದ ಡಾ. ಖಾನ್ 2017 ರಲ್ಲಿ ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಹಲವಾರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಆರಂಭದಲ್ಲಿ, ತುರ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಜೋಡಿಸಿದ್ದಕ್ಕಾಗಿ ಅವರನ್ನು ಮಕ್ಕಳ ರಕ್ಷಕ ಎಂದು ಕರೆಯಲಾಯಿತು. ಆದರೆ ನಂತರ ಯೋಗಿ ಸರ್ಕಾರ ಇವರ ಜೊತೆಗೆ ಆಸ್ಪತ್ರೆಯ ಇತರ ಒಂಬತ್ತು ವೈದ್ಯರು ಮತ್ತು ಸಿಬ್ಬಂದಿ ಮೇಲೆ ಕ್ರಮ ಜರುಗಿಸಲಾಯಿತು. ತನಿಖೆಯಲ್ಲಿ ಇವರದು ತಪ್ಪಿಲ್ಲ ಎಂದು ತಿಳಿದುಬಂದು ಇವರೆಲ್ಲರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಆದರೆ ಜನವರಿ 2020ಯಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆ (ಸಿಎಎ) ಪ್ರತಿಭಟನೆಯ ಸಂದರ್ಭದಲ್ಲಿ ಎಎಂಯುನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಖಾನ್ ಅವರನ್ನು ಮತ್ತೆ ಬಂಧಿಸಲಾಯಿತು. ಆದರೆ ಆರೋಪ ಸಾಬೀತಾಗದೆ ಸೆ.1ರಂದು ಅಲಹಾಬಾದ್ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ, ಅವರು ಮಥುರಾ ಜೈಲಿನಿಂದ ತಡರಾತ್ರಿ ಹೊರನಡೆದರು.

ಸದ್ಯ ವೈದ್ಯ ಕಫೀಲ್ ಖಾನ್ ರಾಜಕೀಯಕ್ಕೆ ಬರುವ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ವೈದ್ಯರಾಗಿಯೇ ಮುಂದುವರೆದು ಜನ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...