Homeಮುಖಪುಟಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾದ ವೈದ್ಯ ಕಫೀಲ್ ಖಾನ್ ತಾವು ಯಾವುದೇ ಪಕ್ಷ ಸೇರುವುದಿಲ್ಲ ಎಂದಿದ್ದಾರೆ. ಬಿಡುಗಡೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಉಹಾಪೋಹಗಳನ್ನು ತಳ್ಳಿಹಾಕಿರುವ ಅವರು ನಾನು ವೈದ್ಯ, ವೈದ್ಯಾನಾಗಿಯೇ ಇರಲು ಬಯಸುತ್ತೇನೆ ಎಂದಿದ್ದಾರೆ.

ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಆದೇಶಿಸಿತ್ತು. ನಂತರ ಅವರನ್ನು ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

ಪ್ರಸ್ತುತ ರಾಜಸ್ತಾನದಲ್ಲಿರುವ ಡಾ. ಖಾನ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಪಿಟಿಐ ತಿಳಿಸಿದೆ. “ನಾನು ವೈದ್ಯನಾಗಿದ್ದೇನೆ ಮತ್ತು ಅದೇ ರೀತಿ ಇರಲು ಬಯಸುತ್ತೇನೆ” ಎಂದ ಅವರು ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಹಾಯ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

“ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮತ್ತು ಮಥುರಾದಿಂದ ಭರತ್‌ಪುರಕ್ಕೆ ಇರುವ ದೂರ ಕೇವಲ 20 ನಿಮಿಷಗಳಾದ್ದರಿಂದ, ಪ್ರಿಯಾಂಕಾ ಗಾಂಧಿ ನನಗೆ ಭರತ್‌ಪುರಕ್ಕೆ ಬರಲು ಹೇಳಿದ್ದರು. ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

ಸೆ.1 ರಂದು ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ ಅವರ ಬಿಡುಗಡೆ ವಿಳಂಬವಾದಾಗ, ಉತ್ತರಪ್ರದೇಶ ಸರ್ಕಾರವು ಮತ್ತೆ ಒಂದು ಪ್ರಕರಣದಲ್ಲಿ ಸಿಲುಕಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಆತಂಕವಿತ್ತು ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಆ ಆತಂಕದಲ್ಲಿದ್ದಾಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾನವೀಯ ನೆಲೆಯಲ್ಲಿ ನನಗೆ ಸಹಾಯ ಮಾಡಿದ್ದಾರೆ. ಆದರೆ ಅಷ್ಟಕ್ಕೆ ಕಾಂಗ್ರೆಸ್ ಪಕ್ಷ ಸೇರಲು ಹೊರಟ್ಟಿದ್ದಾರೆ ಎಂದು ನಿರ್ಣಯಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಈ ನಡುವೆ ಡಾ. ಕಫೀಲ್ ಖಾನ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಗೋರಖ್‌ಪುರದ ವೈದ್ಯಕೀಯ ಕಾಲೇಜಿನಲ್ಲಿ ತಮ್ಮ ಹುದ್ದೆಗೆ ಪುನಃ ನೇಮಕ ಮಾಡುವಂತೆ, ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಶಿಶುವೈದ್ಯರಾಗಿ ಕೆಲಸ ಮಾಡುತ್ತಿದ್ದ ಡಾ. ಖಾನ್ 2017 ರಲ್ಲಿ ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಹಲವಾರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಆರಂಭದಲ್ಲಿ, ತುರ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಜೋಡಿಸಿದ್ದಕ್ಕಾಗಿ ಅವರನ್ನು ಮಕ್ಕಳ ರಕ್ಷಕ ಎಂದು ಕರೆಯಲಾಯಿತು. ಆದರೆ ನಂತರ ಯೋಗಿ ಸರ್ಕಾರ ಇವರ ಜೊತೆಗೆ ಆಸ್ಪತ್ರೆಯ ಇತರ ಒಂಬತ್ತು ವೈದ್ಯರು ಮತ್ತು ಸಿಬ್ಬಂದಿ ಮೇಲೆ ಕ್ರಮ ಜರುಗಿಸಲಾಯಿತು. ತನಿಖೆಯಲ್ಲಿ ಇವರದು ತಪ್ಪಿಲ್ಲ ಎಂದು ತಿಳಿದುಬಂದು ಇವರೆಲ್ಲರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಆದರೆ ಜನವರಿ 2020ಯಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆ (ಸಿಎಎ) ಪ್ರತಿಭಟನೆಯ ಸಂದರ್ಭದಲ್ಲಿ ಎಎಂಯುನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಖಾನ್ ಅವರನ್ನು ಮತ್ತೆ ಬಂಧಿಸಲಾಯಿತು. ಆದರೆ ಆರೋಪ ಸಾಬೀತಾಗದೆ ಸೆ.1ರಂದು ಅಲಹಾಬಾದ್ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ, ಅವರು ಮಥುರಾ ಜೈಲಿನಿಂದ ತಡರಾತ್ರಿ ಹೊರನಡೆದರು.

ಸದ್ಯ ವೈದ್ಯ ಕಫೀಲ್ ಖಾನ್ ರಾಜಕೀಯಕ್ಕೆ ಬರುವ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ವೈದ್ಯರಾಗಿಯೇ ಮುಂದುವರೆದು ಜನ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...