Homeಮುಖಪುಟಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

- Advertisement -
- Advertisement -

ಬುಧವಾರ ಬಿಜೆಪಿಯ ಅಮಿತ್‌ ಶಾ ಅವರನ್ನು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭೇಟಿಯಾದಾಗಿನಿಂದ ಅವರು ಬಿಜೆಪಿ ಸೇರುವ ವಿಚಾರ ಚರ್ಚೆಗೆ ಬಂದಿತ್ತು ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿರುವ ಕ್ಯಾಪ್ಟನ್, ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದಾರೆ.

NDTV ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. “ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ. ಆದರೆ ಮುಂದೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು” ಎಂದು ಹೇಳಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಪಂಜಾಬ್ ಕಾಂಗ್ರೆಸ್ ನಾಯಕ ಅಮರಿಂದರ್‌ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು.

ಇದನ್ನೂ ಓದಿ: ‘ಪಿಎಂ ಪೋಶಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

“ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಪ್ರಶ್ನಿಸಿದ್ದಾರೆ.

ಪಕ್ಷದಿಂದ ನನಗೆ ಮೂರು ಬಾರಿ ಅವಮಾನ ಮಾಡಲಾಗಿದೆ ಎಂದು ಸೋನಿಯಾ ಗಾಂಧಿ ಅವರಿಗೆ ತಿಳಿಸಿರುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಕೆಳಗಿಳಿಯುತ್ತಿದೆ ಎಂದು ಹೇಳಿರುವ  ಅಮರಿಂದರ್‌ ಸಿಂಗ್, ನವಜೋತ್ ಸಿಂಗ್ ಸಿಧು ಅವರನ್ನು “ಚೈಲ್ಡಿಶ್” ಎಂದು ಕರೆದಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇಳಿಮುಖವಾಗುತ್ತಿದೆ. ಜುಲೈ ಮತ್ತು ಸೆಪ್ಟೆಂಬರ್ ನಡುವೆ ಕಾಂಗ್ರೆಸ್ ನಡೆಸಿದ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಜನಪ್ರಿಯತೆ ಏರುತ್ತಿರುವುದು ಮತ್ತು ಕಾಂಗ್ರೆಸ್ ಜನಪ್ರಿಯತೆ 20% ಕುಸಿದಿರುವುದು ವರದಿಯಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಮಿತ್‌ ಶಾ ಅವರನ್ನು ಭೇಟಿಯಾದ ಪಂಜಾಬ್ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...