Homeಕರ್ನಾಟಕಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬರೀ 56 ಇಂಚಿನ ಎದೆ ಇರೋದಲ್ಲ. ಎದೆಯೊಳಗೆ ಹೃದಯ ಇರಬೇಕು. ಆ ಹೃದಯಕ್ಕೆ ರೈತರ, ಕಾರ್ಮಿಕರ, ವಿದ್ಯಾರ್ಥಿ ಯುವಜನರ ಪರವಾದ ತಾಯಿ ಕರುಳು ಇರಬೇಕು’ ಎಂದು ವ್ಯಂಗ್ಯವಾಡಿದರು.

ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಮೈದಾನದಲ್ಲಿ ಇಂದು ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ‘ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ; ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ’ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು ಬಿಜೆಪಿ ಸಂಸ್ಕಾರ. ಬಿಜೆಪಿಯನ್ನು ನಿರಂತರವಾಗಿ ಸೈದ್ಧಾಂತಿಕವಾಗಿ ವಿರೋಧಿಸುತ್ತಾ ಬೀದಿ ಹೋರಾಟಗಳ ಮೂಲಕ ಬೆಳೆದವರು ಲಕ್ಷ್ಮಣ್ ಎಂದು ಮೆಚ್ಚುಗೆ ಸೂಚಿಸಿದರು.

ಸಾಮಾಜಿಕ ನ್ಯಾಯ, ಸಂವಿಧಾನ ರಕ್ಷಣೆ, ಸರ್ವರ ಅಭಿವೃದ್ಧಿ, ಅನ್ನ-ಅಕ್ಷರ-ಆಸರೆ-ಆರೋಗ್ಯ-ವಸತಿ ಜತೆಗೆ ಸಾಮಾಜಿಕ ಪ್ರಗತಿಗೆ ನಿಷ್ಠವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್. ಬಿಜೆಪಿ ಇದಕ್ಕೆ ವಿರುದ್ಧವಾದ ಮಹಿಳೆಯರ, ದಲಿತರ, ಶೂದ್ರರ ಮತ್ತು ದುಡಿಯುವವರ, ಶ್ರಮಿಕರ ವಿರೋಧಿಯಾದ ಶ್ರೀಮಂತರ ಪರವಾದ ಪಕ್ಷ ಎಂದರು.‌

ಬಿಜೆಪಿಯ ಹುಟ್ಟು ಮತ್ತು ಇತಿಹಾಸವನ್ನು ಸರಿಯಾಗಿ ಗಮನಿಸಿ. ಅದು ತನ್ನ ಆಚರಣೆಯಲ್ಲಿ ಬಹುಸಂಖ್ಯಾತರ ವಿರೋಧಿಯಾದ ಪಕ್ಷ. ಶೂದ್ರರು, ದಲಿತರನ್ನು ಸಮಸ್ತ ಮಹಿಳೆಯರನ್ನು ಅಕ್ಷರ ಸಂಸ್ಕೃತಿಯಿಂದ, ಶಿಕ್ಷಣದಿಂದ ದೂರ ಇಡಬೇಕು ಎನ್ನುವುದು ಮನುಸ್ಮೃತಿಯ ಸಿದ್ಧಾಂತ. ಈ ಸಿದ್ಧಾಂತ ಅಸಮಾನತೆಯನ್ನು, ಜಾತಿ ತಾರತಮ್ಯವನ್ನು ಸ್ಪಷ್ಟವಾಗಿ ಬೆಂಬಲಿಸುತ್ತದೆ. ಆದ್ದರಿಂದ ಇದು ಭಾರತದ ಬಹು ಸಂಖ್ಯಾತ ದುಡಿಯುವ ವರ್ಗಗಳ ವಿರೋಧಿಯಾದ ಪಕ್ಷ ನೆರೆದಿದ್ದ ಕಾರ್ಯಕರ್ತರಿಗೆ ಮನವರಿಕೆ ಮಾಡಿಸಿದರು.

ಮೋದಿಯವರು ಇಡಿ ದೇಶದ ಜನರಿಗೆ ಹೇಳಿದ ಸುಳ್ಳುಗಳು ನಿಮಗೆ ಗೊತ್ತಿಲ್ಲವೇ? ಮೋದಿಯವರು ಕಳೆದ 10 ವರ್ಷಗಳಲ್ಲಿ ಒಂದೇ ಒಂದು ದಿನ ಈ ದೇಶದ ನಿರುದ್ಯೋಗ ಸಮಸ್ಯೆ ಬಗ್ಗೆ, ಬೆಲೆ ಏರಿಕೆ ಬಗ್ಗೆ, ಗೊಬ್ಬರದ ಬೆಲೆ ದುಬಾರಿಯಾಗಿರುವ ಬಗ್ಗೆ ಬಾಯಿಯನ್ನೇ ಬಿಟ್ಟಿಲ್ಲ . ಪತ್ರಕರ್ತರಿಗೆ ಹೆದರಿ ಇವತ್ತಿನವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನಡೆಸದ ಏಕೈಕ ಪ್ರಧಾನಮಂತ್ರಿ ಎಂದು ವ್ಯಂಗ್ಯವಾಡಿದರು.

ದೇವರ ಹೆಸರಲ್ಲಿ, ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ವೈಷಮ್ಯ ಸೃಷ್ಟಿಸುವ ರಾಜಕಾರಣ ಬಹಳ ಸುಲಭ. ಆದರೆ, ಉದ್ಯೋಗ ಸೃಷ್ಟಿ ಮಾಡುವುದು, ಈ ದೇಶದ ಬಹುಸಂಖ್ಯಾತರ ಬದುಕಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಜನಪರವಾದ ಕಾಳಜಿ ಬೇಕು. ಅಭಿವೃದ್ಧಿ ಪಥದಲ್ಲಿ ದೇಶ ಮುನ್ನಡೆಸುವುದು ಗೊತ್ತಿರಬೇಕು. ಪ್ರಧಾನಿ ಮೋದಿಯವರಿಂದ ಇದು ಸಾಧ್ಯವಾಗಿಲ್ಲ ಎಂದರು.

ಅದಾನಿ, ಅಂಬಾನಿ ಪರವಾಗಿ ಇದ್ದರೆ ಈ ದೇಶದ ದುಡಿಯುವ ವರ್ಗಗಳು, ಯುವಕ, ಯುವತಿಯರ ಭವಿಷ್ಯ ರೂಪಿಸುವುದಾದರೂ ಹೇಗೆ ? ಇದು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರರಾದ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಶ್ರೀ ತನ್ವೀರ್ ಸೇಠ್, ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಕೆ.ಹರೀಶಗೌಡ, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎಂ.ಕೆ.ಸೋಮಶೇಖರ್, ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿದಂತೆ, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬೂತ್ ಮುಖಂಡರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...