Homeಕರ್ನಾಟಕಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬರೀ 56 ಇಂಚಿನ ಎದೆ ಇರೋದಲ್ಲ. ಎದೆಯೊಳಗೆ ಹೃದಯ ಇರಬೇಕು. ಆ ಹೃದಯಕ್ಕೆ ರೈತರ, ಕಾರ್ಮಿಕರ, ವಿದ್ಯಾರ್ಥಿ ಯುವಜನರ ಪರವಾದ ತಾಯಿ ಕರುಳು ಇರಬೇಕು’ ಎಂದು ವ್ಯಂಗ್ಯವಾಡಿದರು.

ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಮೈದಾನದಲ್ಲಿ ಇಂದು ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ‘ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ; ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ’ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು ಬಿಜೆಪಿ ಸಂಸ್ಕಾರ. ಬಿಜೆಪಿಯನ್ನು ನಿರಂತರವಾಗಿ ಸೈದ್ಧಾಂತಿಕವಾಗಿ ವಿರೋಧಿಸುತ್ತಾ ಬೀದಿ ಹೋರಾಟಗಳ ಮೂಲಕ ಬೆಳೆದವರು ಲಕ್ಷ್ಮಣ್ ಎಂದು ಮೆಚ್ಚುಗೆ ಸೂಚಿಸಿದರು.

ಸಾಮಾಜಿಕ ನ್ಯಾಯ, ಸಂವಿಧಾನ ರಕ್ಷಣೆ, ಸರ್ವರ ಅಭಿವೃದ್ಧಿ, ಅನ್ನ-ಅಕ್ಷರ-ಆಸರೆ-ಆರೋಗ್ಯ-ವಸತಿ ಜತೆಗೆ ಸಾಮಾಜಿಕ ಪ್ರಗತಿಗೆ ನಿಷ್ಠವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್. ಬಿಜೆಪಿ ಇದಕ್ಕೆ ವಿರುದ್ಧವಾದ ಮಹಿಳೆಯರ, ದಲಿತರ, ಶೂದ್ರರ ಮತ್ತು ದುಡಿಯುವವರ, ಶ್ರಮಿಕರ ವಿರೋಧಿಯಾದ ಶ್ರೀಮಂತರ ಪರವಾದ ಪಕ್ಷ ಎಂದರು.‌

ಬಿಜೆಪಿಯ ಹುಟ್ಟು ಮತ್ತು ಇತಿಹಾಸವನ್ನು ಸರಿಯಾಗಿ ಗಮನಿಸಿ. ಅದು ತನ್ನ ಆಚರಣೆಯಲ್ಲಿ ಬಹುಸಂಖ್ಯಾತರ ವಿರೋಧಿಯಾದ ಪಕ್ಷ. ಶೂದ್ರರು, ದಲಿತರನ್ನು ಸಮಸ್ತ ಮಹಿಳೆಯರನ್ನು ಅಕ್ಷರ ಸಂಸ್ಕೃತಿಯಿಂದ, ಶಿಕ್ಷಣದಿಂದ ದೂರ ಇಡಬೇಕು ಎನ್ನುವುದು ಮನುಸ್ಮೃತಿಯ ಸಿದ್ಧಾಂತ. ಈ ಸಿದ್ಧಾಂತ ಅಸಮಾನತೆಯನ್ನು, ಜಾತಿ ತಾರತಮ್ಯವನ್ನು ಸ್ಪಷ್ಟವಾಗಿ ಬೆಂಬಲಿಸುತ್ತದೆ. ಆದ್ದರಿಂದ ಇದು ಭಾರತದ ಬಹು ಸಂಖ್ಯಾತ ದುಡಿಯುವ ವರ್ಗಗಳ ವಿರೋಧಿಯಾದ ಪಕ್ಷ ನೆರೆದಿದ್ದ ಕಾರ್ಯಕರ್ತರಿಗೆ ಮನವರಿಕೆ ಮಾಡಿಸಿದರು.

ಮೋದಿಯವರು ಇಡಿ ದೇಶದ ಜನರಿಗೆ ಹೇಳಿದ ಸುಳ್ಳುಗಳು ನಿಮಗೆ ಗೊತ್ತಿಲ್ಲವೇ? ಮೋದಿಯವರು ಕಳೆದ 10 ವರ್ಷಗಳಲ್ಲಿ ಒಂದೇ ಒಂದು ದಿನ ಈ ದೇಶದ ನಿರುದ್ಯೋಗ ಸಮಸ್ಯೆ ಬಗ್ಗೆ, ಬೆಲೆ ಏರಿಕೆ ಬಗ್ಗೆ, ಗೊಬ್ಬರದ ಬೆಲೆ ದುಬಾರಿಯಾಗಿರುವ ಬಗ್ಗೆ ಬಾಯಿಯನ್ನೇ ಬಿಟ್ಟಿಲ್ಲ . ಪತ್ರಕರ್ತರಿಗೆ ಹೆದರಿ ಇವತ್ತಿನವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನಡೆಸದ ಏಕೈಕ ಪ್ರಧಾನಮಂತ್ರಿ ಎಂದು ವ್ಯಂಗ್ಯವಾಡಿದರು.

ದೇವರ ಹೆಸರಲ್ಲಿ, ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ವೈಷಮ್ಯ ಸೃಷ್ಟಿಸುವ ರಾಜಕಾರಣ ಬಹಳ ಸುಲಭ. ಆದರೆ, ಉದ್ಯೋಗ ಸೃಷ್ಟಿ ಮಾಡುವುದು, ಈ ದೇಶದ ಬಹುಸಂಖ್ಯಾತರ ಬದುಕಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಜನಪರವಾದ ಕಾಳಜಿ ಬೇಕು. ಅಭಿವೃದ್ಧಿ ಪಥದಲ್ಲಿ ದೇಶ ಮುನ್ನಡೆಸುವುದು ಗೊತ್ತಿರಬೇಕು. ಪ್ರಧಾನಿ ಮೋದಿಯವರಿಂದ ಇದು ಸಾಧ್ಯವಾಗಿಲ್ಲ ಎಂದರು.

ಅದಾನಿ, ಅಂಬಾನಿ ಪರವಾಗಿ ಇದ್ದರೆ ಈ ದೇಶದ ದುಡಿಯುವ ವರ್ಗಗಳು, ಯುವಕ, ಯುವತಿಯರ ಭವಿಷ್ಯ ರೂಪಿಸುವುದಾದರೂ ಹೇಗೆ ? ಇದು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರರಾದ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಶ್ರೀ ತನ್ವೀರ್ ಸೇಠ್, ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಕೆ.ಹರೀಶಗೌಡ, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎಂ.ಕೆ.ಸೋಮಶೇಖರ್, ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿದಂತೆ, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬೂತ್ ಮುಖಂಡರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...