Homeಕರ್ನಾಟಕಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬರೀ 56 ಇಂಚಿನ ಎದೆ ಇರೋದಲ್ಲ. ಎದೆಯೊಳಗೆ ಹೃದಯ ಇರಬೇಕು. ಆ ಹೃದಯಕ್ಕೆ ರೈತರ, ಕಾರ್ಮಿಕರ, ವಿದ್ಯಾರ್ಥಿ ಯುವಜನರ ಪರವಾದ ತಾಯಿ ಕರುಳು ಇರಬೇಕು’ ಎಂದು ವ್ಯಂಗ್ಯವಾಡಿದರು.

ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಮೈದಾನದಲ್ಲಿ ಇಂದು ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ‘ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ; ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ’ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು ಬಿಜೆಪಿ ಸಂಸ್ಕಾರ. ಬಿಜೆಪಿಯನ್ನು ನಿರಂತರವಾಗಿ ಸೈದ್ಧಾಂತಿಕವಾಗಿ ವಿರೋಧಿಸುತ್ತಾ ಬೀದಿ ಹೋರಾಟಗಳ ಮೂಲಕ ಬೆಳೆದವರು ಲಕ್ಷ್ಮಣ್ ಎಂದು ಮೆಚ್ಚುಗೆ ಸೂಚಿಸಿದರು.

ಸಾಮಾಜಿಕ ನ್ಯಾಯ, ಸಂವಿಧಾನ ರಕ್ಷಣೆ, ಸರ್ವರ ಅಭಿವೃದ್ಧಿ, ಅನ್ನ-ಅಕ್ಷರ-ಆಸರೆ-ಆರೋಗ್ಯ-ವಸತಿ ಜತೆಗೆ ಸಾಮಾಜಿಕ ಪ್ರಗತಿಗೆ ನಿಷ್ಠವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್. ಬಿಜೆಪಿ ಇದಕ್ಕೆ ವಿರುದ್ಧವಾದ ಮಹಿಳೆಯರ, ದಲಿತರ, ಶೂದ್ರರ ಮತ್ತು ದುಡಿಯುವವರ, ಶ್ರಮಿಕರ ವಿರೋಧಿಯಾದ ಶ್ರೀಮಂತರ ಪರವಾದ ಪಕ್ಷ ಎಂದರು.‌

ಬಿಜೆಪಿಯ ಹುಟ್ಟು ಮತ್ತು ಇತಿಹಾಸವನ್ನು ಸರಿಯಾಗಿ ಗಮನಿಸಿ. ಅದು ತನ್ನ ಆಚರಣೆಯಲ್ಲಿ ಬಹುಸಂಖ್ಯಾತರ ವಿರೋಧಿಯಾದ ಪಕ್ಷ. ಶೂದ್ರರು, ದಲಿತರನ್ನು ಸಮಸ್ತ ಮಹಿಳೆಯರನ್ನು ಅಕ್ಷರ ಸಂಸ್ಕೃತಿಯಿಂದ, ಶಿಕ್ಷಣದಿಂದ ದೂರ ಇಡಬೇಕು ಎನ್ನುವುದು ಮನುಸ್ಮೃತಿಯ ಸಿದ್ಧಾಂತ. ಈ ಸಿದ್ಧಾಂತ ಅಸಮಾನತೆಯನ್ನು, ಜಾತಿ ತಾರತಮ್ಯವನ್ನು ಸ್ಪಷ್ಟವಾಗಿ ಬೆಂಬಲಿಸುತ್ತದೆ. ಆದ್ದರಿಂದ ಇದು ಭಾರತದ ಬಹು ಸಂಖ್ಯಾತ ದುಡಿಯುವ ವರ್ಗಗಳ ವಿರೋಧಿಯಾದ ಪಕ್ಷ ನೆರೆದಿದ್ದ ಕಾರ್ಯಕರ್ತರಿಗೆ ಮನವರಿಕೆ ಮಾಡಿಸಿದರು.

ಮೋದಿಯವರು ಇಡಿ ದೇಶದ ಜನರಿಗೆ ಹೇಳಿದ ಸುಳ್ಳುಗಳು ನಿಮಗೆ ಗೊತ್ತಿಲ್ಲವೇ? ಮೋದಿಯವರು ಕಳೆದ 10 ವರ್ಷಗಳಲ್ಲಿ ಒಂದೇ ಒಂದು ದಿನ ಈ ದೇಶದ ನಿರುದ್ಯೋಗ ಸಮಸ್ಯೆ ಬಗ್ಗೆ, ಬೆಲೆ ಏರಿಕೆ ಬಗ್ಗೆ, ಗೊಬ್ಬರದ ಬೆಲೆ ದುಬಾರಿಯಾಗಿರುವ ಬಗ್ಗೆ ಬಾಯಿಯನ್ನೇ ಬಿಟ್ಟಿಲ್ಲ . ಪತ್ರಕರ್ತರಿಗೆ ಹೆದರಿ ಇವತ್ತಿನವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನಡೆಸದ ಏಕೈಕ ಪ್ರಧಾನಮಂತ್ರಿ ಎಂದು ವ್ಯಂಗ್ಯವಾಡಿದರು.

ದೇವರ ಹೆಸರಲ್ಲಿ, ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ವೈಷಮ್ಯ ಸೃಷ್ಟಿಸುವ ರಾಜಕಾರಣ ಬಹಳ ಸುಲಭ. ಆದರೆ, ಉದ್ಯೋಗ ಸೃಷ್ಟಿ ಮಾಡುವುದು, ಈ ದೇಶದ ಬಹುಸಂಖ್ಯಾತರ ಬದುಕಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಜನಪರವಾದ ಕಾಳಜಿ ಬೇಕು. ಅಭಿವೃದ್ಧಿ ಪಥದಲ್ಲಿ ದೇಶ ಮುನ್ನಡೆಸುವುದು ಗೊತ್ತಿರಬೇಕು. ಪ್ರಧಾನಿ ಮೋದಿಯವರಿಂದ ಇದು ಸಾಧ್ಯವಾಗಿಲ್ಲ ಎಂದರು.

ಅದಾನಿ, ಅಂಬಾನಿ ಪರವಾಗಿ ಇದ್ದರೆ ಈ ದೇಶದ ದುಡಿಯುವ ವರ್ಗಗಳು, ಯುವಕ, ಯುವತಿಯರ ಭವಿಷ್ಯ ರೂಪಿಸುವುದಾದರೂ ಹೇಗೆ ? ಇದು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರರಾದ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಶ್ರೀ ತನ್ವೀರ್ ಸೇಠ್, ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಕೆ.ಹರೀಶಗೌಡ, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎಂ.ಕೆ.ಸೋಮಶೇಖರ್, ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿದಂತೆ, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬೂತ್ ಮುಖಂಡರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...