Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...