Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...