Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...