Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...