Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...