Homeಫ್ಯಾಕ್ಟ್‌ಚೆಕ್ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ‘ಕಾಂತಾರ’ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿಲ್ಲ, ಕೇವಲ ಅರ್ಹತೆ ಪಡೆದಿದೆಯಷ್ಟೇ!

- Advertisement -
- Advertisement -

2022ನೇ ಇಸವಿಯಲ್ಲಿ ಗಮನ ಸೆಳೆದಿದ್ದ ‘ಕಾಂತಾರ’ ಸಿನಿಮಾವು ಈಗ ಸುದ್ದಿಯಲ್ಲಿದೆ. “ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ…” ಎಂದು ಹೊಂಬಾಳೆ ಫಿಲ್ಮ್ಸ್‌‌ ಹೇಳಿಕೊಂಡಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮಗಳು ಮಾಡುತ್ತಿರುವ ಸುದ್ದಿಗಳು ಮಾತ್ರ ಅತಿರಂಜಕವಾಗಿವೆ. ಕಾಂತಾರ ಸಿನಿಮಾವು ಆಸ್ಕರ್ ಪ್ರಶಸ್ತಿಯನ್ನೇ ಪಡೆದುಕೊಂಡಿದೆ ಎನ್ನುವಂತೆ ಬಿಗ್ ಬ್ರೇಕಿಂಗ್ ನ್ಯೂಸ್‌  ಪ್ರಸಾರ ಮಾಡಿವೆ. ‘ಕಾಂತಾರ’ ಸಿನಿಮಾ ಎರಡು ವಿಭಾಗದಲ್ಲಿ ಅರ್ಹತೆ ಪಡೆದಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಡಿರುವ ಟ್ವೀಟ್‌ಅನ್ನೇ ಆಧಾರವಾಗಿಟ್ಟುಕೊಂಡು, “ಕಾಂತಾರ ಸಿನಿಮಾ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಪ್ಟೇಡ್‌ ಪ್ರಕಾರ, “ಕಾಂತಾರ 2 ವಿಭಾಗದಲ್ಲಿ ಅರ್ಹತೆ ಪಡೆದುಕೊಂಡಿದೆ”. ಯಾವ ವಿಭಾಗವೆಂಬುದನ್ನು ಸ್ಪಷ್ಟಪಡಿಸಿಲ್ಲ.

ಫ್ಯಾಕ್ಟ್‌ಚೆಕ್:

‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು, ಚಿತ್ರದಲ್ಲಿ ಭೂತಕೋಲವನ್ನು ಹಣ ಮಾಡುವ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಮತ್ತು ಸಂಗೀತವನ್ನು ಕದಿಯಲಾಗಿದೆ ಎಂದು ಆರೋಪಗಳು ಬಂದಿದ್ದವು. ಟೀಕೆ- ಟಿಪ್ಪಣಿಗಳಾಚೆಗೆ ಕಾಂತಾರ ಗಲ್ಲಾಪೆಟ್ಟಿಗೆಯನ್ನು ತುಂಬಿಸಿತ್ತು. ಈಗ ಕಾಂತಾರ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನ ಪಡೆದುಕೊಂಡಿದೆ ಎಂದು ಸುಳ್ಳು ಸುದ್ದಿಗಳನ್ನು ಕನ್ನಡದ ಮುಖ್ಯವಾಹಿನಿಗಳು ಪ್ರಸಾರ ಮಾಡುತ್ತಿವೆ. ನೀವು ಮಾಡುವ ಸಿನಿಮಾವು ಕೂಡ ಆಸ್ಕರ್‌ಗೆ ಅರ್ಹತೆ ಪಡೆಯಬಹುದು. ಆದರೆ ಕೆಲವೊಂದು ಷರತ್ತುಗಳು ಇದಕ್ಕೆ ಅನ್ವಯಿಸುತ್ತವೆಯಷ್ಟೇ. ಅರ್ಹತೆ ಪಡೆಯುವುದಕ್ಕೂ ನಾಮನಿರ್ದೇಶನವಾಗುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.

ಅರ್ಹತೆಗೂ ನಾಮನಿರ್ದೇಶನಕ್ಕೂ ವ್ಯತ್ಯಾಸ ಇಲ್ಲವೇ?

ಆಸ್ಕರ್ ಅಕಾಡೆಮಿಯು (Academy of Motion Picture Arts and Sciences)  95ನೇ ಅಕಾಡೆಮಿ ಅವಾರ್ಡಿಗೆ ಅರ್ಹತೆ ಪಡೆದಿರುವ 301 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದು ಪ್ರಾಥಮಿಕ ಹಂತ. ‘ಕಾಂತಾರ’ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾವೂ ಈ ಪಟ್ಟಿಯಲ್ಲಿದೆ. (ಆ ಪಟ್ಟಿ ‘ಇಲ್ಲಿದೆ’.)

ಆಸ್ಕರ್‌ ಪ್ರಶಸ್ತಿಗೆ ಅರ್ಹತೆ ಪಡೆದುಕೊಳ್ಳಲು ಅಮೆರಿಕದ ಆರು ಮೆಟ್ರೊಪಾಲಿಟನ್ ನಗರಗಳಲ್ಲಿ (Los Angeles County; the City of New York; the Bay Area; Chicago, Illinois; Miami, Florida; and Atlanta, Georgia) ಎಲ್ಲಾದರೂ ಕನಿಷ್ಟ ಒಂದು ಕಡೆ ಬಿಡುಗಡೆಯಾಗಿಬೇಕು. ಪ್ರಶಸ್ತಿಗೆ ಪರಿಗಣಿಸಲಾದ ವರ್ಷದಲ್ಲಿ ಕನಿಷ್ಠ ಒಂದು ವಾರ ಸದರಿ ನಗರವೊಂದರಲ್ಲಿ ಪ್ರದರ್ಶನವಾಗಿರಬೇಕು. ಅಂದರೆ ಜನವರಿ 1, 2022ರಿಂದ ಡಿಸೆಂಬರ್ 31, 2022ರ ನಡುವೆ ಸತತ ಏಳು ದಿನ ಒಂದೇ ಜಾಗದಲ್ಲಿ ಕಾಂತಾರ ಪ್ರದರ್ಶನ ಕಂಡಿದೆ ಎಂದರ್ಥ. ಈ ಅರ್ಹತೆಯನ್ನು ಕಾಂತಾರ ಹೊಂದಿದೆ. ಹಾಗಾಗಿ ಕಾಂತಾರಕ್ಕೆ ಸಿಕ್ಕಿರುವುದು ಇನ್ನು ಅರ್ಹತೆ ಮಾತ್ರ. 2015ನೇ ಇಸವಿಯಲ್ಲಿ ಅನುಪ್ ಭಂಡಾರಿ ಅವರ ‘ರಂಗಿತರಂಗ’ ಹಾಗೂ ಕಿಶನ್ ಅವರ ‘ಕೇರ್ ಆಫ್ ಫುಟ್ಪಾತ್ 2’ ಸಿನಿಮಾ ಅರ್ಹತೆ ಪಡೆದಿದ್ದವು.

ಮುಖ್ಯವಾಹಿನಿಗಳು ಮಧ್ಯಮಗಳು ಪ್ರಸಾರ ಮಾಡುತ್ತಿರುವ ಸುಳ್ಳು ಸುದ್ದಿಗೆ ಪ್ರತಿಕ್ರಿಸಿರುವ ಹಿರಿಯ ಪತ್ರಕರ್ತರು ಹಾಗೂ ಚಿಂತಕರಾದ ರಾಜಾರಾಮ್ ತಲ್ಲೂರ್‌ “ಕಾಂತಾರ, ಈ ಬಾರಿ ಆಸ್ಕರ್‌ಗೆ ಸ್ಪರ್ಧಿಸಲು ಅರ್ಹತೆ ಪಡೆದಿದೆಯಷ್ಟೇ. ಇನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ತಿರುಗಾಡುತ್ತಿರುವಂತೆ ಬೆಸ್ಟ್ ಪಿಕ್ಚರ್, ನಟ, ನಟಿ ಎಂದೆಲ್ಲ ಕೆಟಗರಿಗಳಿಗೆ ನಾಮಿನೇಷನ್ ಪ್ರಕ್ರಿಯೆಯೇ ಶುರು ಆಗಿಲ್ಲ” ಎಂದು ವಿವರಿಸಿದ್ದಾರೆ.

95ನೇ ಆಸ್ಕರ್‌ ಪ್ರಶಸ್ತಿಗೆ ಪ್ರದರ್ಶನಗಳು ಮಾರ್ಚ್ 12, 2023 ರಂದು Ovation ಹಾಲಿವುಡ್‌ನಲ್ಲಿರುವ Dolby® ಥಿಯೇಟರ್‌ನಲ್ಲಿ ನಡೆಯಲಿದೆ ಮತ್ತು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡಪರ ಹೋರಾಟಗಾರರಾದ ಎಸ್‌.ಸಿ.ದಿನೇಶ್‌ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿ, ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ಸುದ್ದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

“95ನೇ ಅಕಾಡೆಮಿ ಅವಾರ್ಡ್‌ ಗಳ ನಾಮನಿರ್ದೇಶನಗಳನ್ನು 2023ರ ಜನವರಿ 24ರಂದು ಘೋಷಿಸಲಾಗುವುದು. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಳನ್ನು ನೀಡುವ the Academy of Motion Picture Arts and Sciences ನೀಡಿರುವ ಅಧಿಕೃತ ಹೇಳಿಕೆ ಇದು. ನಮ್ಮ ಮಾಧ್ಯಮಗಳಿಗೆ ಯಾಕಿಷ್ಟು ಆತುರ? ವಿಷಯ ಏನು ಅಂದ್ರೆ ಆಸ್ಕರ್‌ ಅರ್ಹತೆ ಪಟ್ಟಿಯಲ್ಲಿ 301 ಸಿನಿಮಾಗಳು ಕಾಣಿಸಿಕೊಂಡಿವೆ. ಅವುಗಳಲ್ಲಿ ಕಾಂತಾರವೂ ಇದೆ, ವಿಕ್ರಾಂತ್‌ ರೋಣವೂ ಇದೆ. ಕನ್ನಡ ಸಿನಿಮಾಗಳಿಗೆ ಆಸ್ಕರ್‌ ಸಿಗಲಿ, ಅದು ನಮ್ಮ ಆಸೆಯೂ ಕೂಡ ಹೌದು. ಆದರೆ ಹೀಗೆ ಆತುರಗೇಡಿಗಳಾದರೆ ಹೇಗೆ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 301 ಚಿತ್ರಗಳ ಸಾಲಿನಲ್ಲಿ ಕಾಂತಾರ ಹಾಗೂ ವಿಕ್ರಾಂತ್ ರೋಣ ಸಿನಿಮಾಗಳು ಅರ್ಹತೆ ಪಡೆದುಕೊಂಡಿವೆ. ಆದರೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು, “ಕಾಂತಾರ ಚಿತ್ರವು ನಟ-ನಟಿ ವಿಭಾಗದಲ್ಲಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ” ಎಂದು ತಪ್ಪಾಗಿ ಸುದ್ದಿ ಪ್ರಸಾರ ಮಾಡಿವೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...