Homeಮುಖಪುಟ'ರಾಜಕೀಯ ವಿರೋಧಿಗಳಷ್ಟೇ ಅಲ್ಲ, ಅವರು ಮನುಕುಲದ ಶತ್ರುಗಳು..'; ಬಿಜೆಪಿ ವಿರುದ್ಧ ಸ್ಟಾಲಿನ್ ಆಕ್ರೋಶ

‘ರಾಜಕೀಯ ವಿರೋಧಿಗಳಷ್ಟೇ ಅಲ್ಲ, ಅವರು ಮನುಕುಲದ ಶತ್ರುಗಳು..’; ಬಿಜೆಪಿ ವಿರುದ್ಧ ಸ್ಟಾಲಿನ್ ಆಕ್ರೋಶ

- Advertisement -
- Advertisement -

ಬಿಜೆಪಿ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿರುವ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತಮ್ಮ ರಾಜಕೀಯ ವಿರೋಧಿಯಾದ ಬಿಜೆಪಿಯನ್ನು “ದೇಶ ಮತ್ತು ಮಾನವಕುಲದ ಶತ್ರು” ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಪಕ್ಷದ ಪ್ರಣಾಳಿಕೆಯ ಬಗ್ಗೆ ಇಂದು ಮಾಧ್ಯಮಗಳಿಗೆ ವಿವರಣೆ ನೀಡಿ, 21 ಡಿಎಂಕೆ ಅಭ್ಯರ್ಥಿಗಳಿಗೆ ಬೆಂಬಲ ಕೋರಿ ಪಕ್ಷದ ಕಾರ್ಯಕರ್ತರಿಗೆ ಬರೆದ ಪತ್ರದಲ್ಲಿ, ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಎದುರಿಸಲಿರುವ ಶತ್ರುಗಳು ನಮ್ಮ ರಾಜಕೀಯ ಶತ್ರುಗಳು ಮಾತ್ರವಲ್ಲ, ಅವರು ಭಾರತದ ಶತ್ರುಗಳು, ಭಾರತೀಯ ಸಂವಿಧಾನದ ಶತ್ರುಗಳು’ ಎಂದು ಆಕ್ರೋಶ ಹೊರಹಾಕಿದ್ದಾರೆ.

“ಭಾರತದ ಏಕತೆ ಮತ್ತು ಸಮಗ್ರತೆಯ ಶತ್ರುಗಳು; ಭಾರತದ ಬಹುತ್ವ ಮತ್ತು ಜಾತ್ಯತೀತತೆಯ ಶತ್ರುಗಳು. ಒಕ್ಕೂಟದ ಶತ್ರುಗಳು. ಸಂಕ್ಷಿಪ್ತವಾಗಿ ಹೇಳಬೇಕೆಂದರೆ, ಅವರು ಮನುಕುಲದ ಶತ್ರುಗಳು” ಎಂದು ಮುಖ್ಯಮಂತ್ರಿ ಹೇಳಿದರು.

“ತಮಿಳುನಾಡಿನ ಜನತೆ ಡಿಎಂಕೆ ನೇತೃತ್ವದ ಮೈತ್ರಿಕೂಟದೊಂದಿಗಿದ್ದಾರೆ ಎಂಬುದು ಸ್ಪಷ್ಟವಾಗಿರುವುದರಿಂದ ಬಿಜೆಪಿ ಈಗ ತಮಿಳು ಜನರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿದೆ. ಪ್ರಧಾನಿಯಿಂದ ಹಿಡಿದು ಕೇಂದ್ರ ಸಚಿವರು, ಪಕ್ಷದ ನಾಯಕರವರೆಗೂ ಎಲ್ಲರೂ ಭಾಗಿಯಾಗಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ತಮಿಳುನಾಡಿಗೆ ಮಾಡಿರುವ ಕೆಲಸಗಳ ಬಗ್ಗೆ ಹೇಳಲು ಏನೂ ಇಲ್ಲದ ಕಾರಣ ಅವರು ಡಿಎಂಕೆಯನ್ನು ಟೀಕಿಸುತ್ತಿದ್ದಾರೆ” ಎಂದು ಅವರು ಹೇಳಿದರು.

ಎಂಕೆ ಸ್ಟಾಲಿನ್ ಅವರು ಬುಧವಾರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು, ಪುದುಚೇರಿಗೆ ರಾಜ್ಯ ಸ್ಥಾನಮಾನ, ನೀಟ್ ಪರೀಕ್ಷೆಗಳ ನಿಷೇಧ, ಮುಖ್ಯಮಂತ್ರಿಗೆ ರಾಜ್ಯಪಾಲರನ್ನು ನೇಮಿಸುವ ಅಧಿಕಾರವನ್ನು ನೀಡುವುದು ಸೇರಿದಂತೆ ಇತರ ಭರವಸೆಗಳನ್ನು ನೀಡಿದರು. ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದಕ್ಕಾಗಿ ಸ್ಟಾಲಿನ್ ತಮ್ಮ ಸಹೋದರಿ ಕನಿಮೊಳಿ ಅವರನ್ನು ಶ್ಲಾಘಿಸಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನೂ ಪಕ್ಷ ಪ್ರಕಟಿಸಿದೆ.

ಇದನ್ನೂ ಓದಿ; ಪೊನ್ಮುಡಿ ಸಂಪುಟ ಮರು ಸೇರ್ಪಡೆಗೆ ನಿರಾಕರಣೆ; ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...