Homeಮುಖಪುಟಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ

ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ

ಈ ಸರಕಾರ ಮತ್ತೆ ಅಧಿಕಾರಕ್ಕೆ ಬಂದ ಒಂದೇ ವರ್ಷದ ಒಳಗೆ ಒಂದೇ ಹೊತ್ತಿಗೆ ಬಹುದೊಡ್ಡ ಸಂಖ್ಯೆಯ ಜನರಿಗೆ ಭಾರೀ ಸಂಕಷ್ಟಗಳನ್ನು ಒಡ್ಡಿದ ಮೂರನೆಯ ಅಧಿಕೃತ ಕೃತ್ಯವಿದು.

- Advertisement -
- Advertisement -

ಕೊರೊನಾ ಪಿಡುಗನ್ನು ಎದುರಿಸಲು ಹೇರಲಾದ ತಯಾರಿಯೇ ಇಲ್ಲದ ಸಂಪೂರ್ಣ ಲಾಕ್‌ಡೌನ್ ಸೇರಿದಂತೆ ನರೇಂದ್ರ ಮೋದಿ ಸರಕಾರವು ಈ ತನಕ ತೆಗೆದುಕೊಂಡ ನಿರಂಕುಶ ಕ್ರಮಗಳೆಲ್ಲವೂ ಕೋಟ್ಯಂತರ ಜನರಿಗೆ ಬಹಳಷ್ಟು ಸಂಕಟವನ್ನೊಡ್ಡಿವೆ. ಅರೆಬೆಂದ ನಿರ್ಧಾರಗಳನ್ನು ಜಾರಿ ಮಾಡುತ್ತಿರುವ ಸರಕಾರದ ಬಳಿ ನಿರ್ದಿಷ್ಟ ಕಾರ್ಯತಂತ್ರ ಇದ್ದಂತೆ ಕಾಣುವುದಿಲ್ಲ. ಅಷ್ಟೇ ಅಲ್ಲ, ಮಾನವೀಯತೆಯ ಲವಲೇಶವೂ ಕಾಣುವುದಿಲ್ಲ.

ಸಿದ್ಧಾರ್ಥ ಭಾಟಿಯಾ

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ರಾಷ್ಟ್ರೀಯ ಪೌರತ್ವ ನೋಂದಣಿ (ತಿದ್ದುಪಡಿ) ಕಾಯಿದೆಯ ಪ್ರಕ್ರಿಯೆಯು ಭಾರತದ ಲಕ್ಷಾಂತರ ಜನರನ್ನು ದೇಶರಹಿತರನ್ನಾಗಿ ಮಾಡಬಹುದಿತ್ತು. ಏಕಾಏಕಿಯಾಗಿ ಲಾಕ್‌ಡೌನ್ ಹೇರಲಾದ ಕೆಲವೇ ದಿನಗಳಲ್ಲಿ ಲೆಕ್ಕವೇ ಇಲ್ಲದಷ್ಟು ಭಾರತೀಯರು ಮನೆಯೇ ಇಲ್ಲದವರಾಗಿದ್ದಾರೆ. ತಾವು ಎಲ್ಲಿದ್ದೆವೋ ಅಲ್ಲಿಯೇ ಅವರು ವಸ್ತುಶಃ ಕಟ್ಟುಬಿದ್ದಿದ್ದಾರೆ; ಅವರಿಗೆ ಹೋಗಲು ಯಾವುದೇ ಜಾಗವಿಲ್ಲ. ಅವರು ತಮ್ಮ ಹಿಂದಿನ ವಾಸಸ್ಥಾನವನ್ನು ಬಿಟ್ಟುಹೋದವರು ಮತ್ತು ಅವರೀಗ ಹಳ್ಳಿಗಳಲ್ಲಿರುವ ತಮ್ಮ ಮನೆಗಳನ್ನು ತಲಪುವಂತಿಲ್ಲ. ಏಕೆಂದರೆ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚಿವೆ.

ಅವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಕೆಲವು ರಾಜಕಾರಣಿಗಳು ಬಯಸಿದ್ದಾರೆ. ಇನ್ನು, ಆಳುವ ಪಕ್ಷದ ಕೆಲವು ನಾಯಕರು ಈ ಬಡಪಾಯಿಗಳೇ ಇದಕ್ಕೆ ಹೊಣೆಗಾರರು ಮತ್ತು ಈ ಕಡ್ಡಾಯ ರಜೆಯ ಲಾಭಪಡೆದು ತಮ್ಮ ಮನೆಗಳಿಗೆ ಹೋಗಬಯಸುವ ಬೇಜವಾಬ್ದಾರಿ ಜನರು ಎಂದು ಭಾವಿಸಿದ್ದಾರೆ.

ಈ ವಲಸೆ ಕಾರ್ಮಿಕರ ಬಳಿ ಆಹಾರವಿಲ್ಲ, ಆಶ್ರಯವಿಲ್ಲ, ಆಶಾವಾದವೂ ಇಲ್ಲ. ಅವರಲ್ಲಿ ಅನೇಕರು ಕೆಲಸ ಕಳೆದುಕೊಂಡವರು; ಯಾಕೆಂದರೆ, ಅವರ ಸಂಬಳವನ್ನು ಮುಂದುವರಿಸಲು ಅವರ ಮಾಲಕರಿಗೆ ಸಾಧ್ಯವಿಲ್ಲ. ಇಂತಹಾ ಪರಿಸ್ಥಿತಿಯಲ್ಲಿ ಆಹಾರ ಕೊಳ್ಳಲಾಗಲಿ, ಬಾಡಿಗೆ ನೀಡಲಾಗಲಿ ಅವರಿಗೆ ಸಾಧ್ಯವಾಗುವಂತಿರಲಿಲ್ಲ. ತಾವು ಕಾಯಿಲೆ ಬೀಳಬಹುದು ಎಂಬ ಭಯವೂ ಅವರನ್ನು ಕಾಡುತ್ತಿರಬಹುದು. ಇಂತಹಾ ಸಂದರ್ಭದಲ್ಲಿ ತಾವು ಸುರಕ್ಷಿತವಾಗಿರಬಹುದಾದ ಒಂದೇ ಒಂದು ಸ್ಥಳಕ್ಕೆ- ಅಂದರೆ, ತಮ್ಮತಮ್ಮ ಮನೆಗಳಿಗೆ ಅವರು ಹೊರಟರು. ಆದರೀಗ ಗಡಿಗಳನ್ನು ಮುಚ್ಚಿರುವುದರಿಂದ ಅದೂ ದೂರದ ಕನಸಾಗಿದೆ. ಜನರ ಗುಂಪುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇವು ಮಾನವೀಯ ದುರಂತವೊಂದು ರೂಪುಗೊಳ್ಳುತ್ತಿರುವುದರ ಲಕ್ಷಣಗಳು.

ಇದು ಮೋದಿ ಉಂಟು ಮಾಡಿದ “ಸಾಮಾಜಿಕ ಅಂತರ”

ಈ ಸರಕಾರ ಮತ್ತೆ ಅಧಿಕಾರಕ್ಕೆ ಬಂದ ಒಂದೇ ವರ್ಷದ ಒಳಗೆ ಒಂದೇ ಹೊತ್ತಿಗೆ ಬಹುದೊಡ್ಡ ಸಂಖ್ಯೆಯ ಜನರಿಗೆ ಭಾರೀ ಸಂಕಷ್ಟಗಳನ್ನು ಒಡ್ಡಿದ ಮೂರನೆಯ ಅಧಿಕೃತ ಕೃತ್ಯವಿದು. ಸ್ವಲ್ಪ ಹಿಂದೆ ಹೋದರೆ, ನೋಟು ಅಮಾನ್ಯೀಕರಣವನ್ನೂ ಈ ಪಟ್ಟಿಗೆ ಸೇರಿಸಿಕೊಳ್ಳಬಹುದು. ಈ  ಪ್ರತಿಯೊಂದು ನಿರಂಕುಶ ನಿರ್ಧಾರಗಳಲ್ಲಿ ಸಮಾನ ಅಂಶಗಳಿವೆ. ಅವೆಂದರೆ, ಯಾವುದೇ ಪೂರ್ವಯೋಜನೆ ಇಲ್ಲದಿರುವುದು ಮತ್ತು ಅಧ್ವಾನದ ಅನುಷ್ಟಾನ. ಇಲ್ಲಿ ಇನ್ನೊಂದು ಕಣ್ಣಿಗೆ ರಾಚುವ ಅಂಶವಿದೆ- ಅದೆಂದರೆ, ಮಾನವ ಸಂಕಷ್ಟಗಳ ಕುರಿತು ಸಂಪೂರ್ಣ ಅಸಡ್ಡೆ.

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯಂತಹ ಕೆಲವೇ ಕ್ರಮಗಳನ್ನು ಬಿಟ್ಟರೆ, ಭಾರತದಲ್ಲಿ ಸಾಮಾಜಿಕ ಸುರಕ್ಷೆಯ ಯಾವುದೇ ಬಲೆ ಅಥವಾ ವ್ಯವಸ್ಥೆ ಇಲ್ಲ. ಏನಾದರೊಂದು ಸ್ವಲ್ಪ ಮಟ್ಟಿಗೆ ಇದ್ದರೆ, ಅದೂ ಕೂಡಾ ಈಗ ಅಸ್ತವ್ಯಸ್ತಗೊಂಡಿದೆ. ಧೋರಣೆಗಳು ನಮ್ಮಲ್ಲಿ ಬಡವರ ಅಗತ್ಯಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದೇ ಅಪರೂಪ. ಆದರೆ, ನಾವೀಗ ಸಂಪೂರ್ಣವಾದ ಅಸಹಾನುಭೂತಿಯನ್ನಷ್ಟೇ ನೋಡುತ್ತಿದ್ದೇವೆ. ಈ ಲಾಕ್‌ಡೌನ್‌ ನಂತರ ಅತ್ಯಂತ ಹೆಚ್ಚು ಸಂಕಷ್ಟಕ್ಕೆ ಒಳಗಾದವರನ್ನೇ ಸಮಾನ ಒಳಿತನ್ನು ಕುರಿತು ಯೋಚಿಸದ ದೇಶವಿರೋಧಿಗಳೆಂಬಂತೆ ಚಿತ್ರಿಸುವ ಘೋರ ಅಮಾವೀಯತೆಯನ್ನು ತೋರಿಸಲಾಗುತ್ತಿದೆ.

ಮೋದಿ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವೂ ಅಗತ್ಯವಾಗಿದ್ದು, ಅಂತಿಮವಾಗಿ ದೇಶಕ್ಕೆ ಲಾಭ ತಂದುಕೊಡುವಂತವುಗಳು ಎಂದು ಆತ ಮತ್ತಾತನ ಬೆಂಬಲಿಗರು ವಾದಿಸಬಹುದು. ಆ ಕುರಿತು ಅವರು ಆಗಲೇ ನ್ಯಾಯತೀರ್ಮಾನ ಮಾಡಿ ಆಗಿದೆ. ಆದರೂ, ನಾವು ಅವುಗಳನ್ನು ಒಂದೊಂದಾಗಿ ಮತ್ತು ಚುಟುಕಾಗಿ ಪರಿಶೀಲಿಸೋಣ.

ಕಪ್ಪು ಹಣವನ್ನು ನಿವಾರಿಸಲು ಅಮಾನ್ಯೀಕರಣ ಅತ್ಯಗತ್ಯವಾಗಿತ್ತು ಎಂದು ವಾದಿಸಲಾಯಿತು. (ಅದು ಹೇಗೆ ಭಯೋತ್ಪಾದನೆಯ ಬೆನ್ನು ಮೂಳೆ ಮುರಿಯಲಿದೆ ಎಂದೂ ಹೇಳಲಾಯಿತು. ವಾಸ್ತವವಾಗಿ ಆ ಬಳಿಕವೇ ಅನೇಕ ಗಂಭೀರ ಭಯೋತ್ಪಾದಕ ದಾಳಿಗಳು ನಡೆದದ್ದು!) ಅದರ ಪರಿಣಾಮ ಏನಾಯಿತು ಎಂಬುದನ್ನು ನಾವೆಲ್ಲರೂ ಕಂಡಿದ್ದೇವೆ- ಅಲ್ಪಾವಧಿಗೆ ಮಾತ್ರವಲ್ಲ; ದೀರ್ಘಾವಧಿಗೂ ಕೂಡಾ. ಅದರಿಂದ ಬಡವರೇ ಅತ್ಯಂತ ಹೆಚ್ಚು ಬಾಧಿತರಾದರು. ಈಗಲೂ ನಗದು ವ್ಯವಹಾರ ಮತ್ತು ಕಪ್ಪು ಹಣ ಹಾಗೆಯೇ ಇದೆ. ಹಾಗಿರುವಾಗ ಮೋದಿ ಜನರಿಗೆ ವ್ಯರ್ಥವಾಗಿ ಅಷ್ಟೊಂದು ಪೀಡೆ ನೀಡಿದ್ದಾದರೂ ಏಕೆ?

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370ನ್ನು ರದ್ದುಗೊಳಿಸಿದ ಬಳಿಕ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಹೇರಲಾಯಿತು. ಇಂಟರ್ನೆಟ್ ಕೂಡಾ ಸ್ಥಗಿತಗೊಳಿಸಲಾಯಿತು. ಇದನ್ನು ಮೋದಿಯ ಮೇಲೆ ಅಂತಹಾ ಪ್ರೀತಿ ಇಲ್ಲದವರು ಕೂಡಾ ಕೇವಲ ಹುಸಿ ದೇಶಪ್ರೇಮದ ಬಲೆಗೆ ಬಿದ್ದು ಹೊಗಳಿದರು. ಆದರೆ, ಇದು ಮತ್ತೆ ಎಪ್ಪತ್ತು ಲಕ್ಷ ಜನಸಾಮಾನ್ಯರಿಗೆ ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿತು.

ಮೋದಿಯ ಕಾಶ್ಮೀರ ಲಾಕ್‌ಡೌನ್ ಅಮಾನವೀಯತೆ

“ಕಾಶ್ಮೀರವು ಕೊನೆಗೂ ಭಾರತದ ಭಾಗವಾಯಿತು” ಎಂದು ಹೊರಗೆ ಕುಳಿತು, ಅತಿರೇಕದ ಹುಸಿ ದೇಶಪ್ರೇಮ ತೋರುವ ಅನಿವಾಸಿ ಭಾರತೀಯರು ಘೋಷಿಸಿದರೂ, ಈ ಕ್ರಮವು ವ್ಯಾಪಕವಾದ ಅಂತರರಾಷ್ಟ್ರೀಯ ಖಂಡನೆಗೆ ಗುರಿಯಾಯಿತು. ಜಗತ್ತಿಗೆ ಕಾಶ್ಮೀರದ ಮೇಲೆ ಭಾರತದ ಹಕ್ಕಿನ ಕುರಿತು ಎಂದಿಗೂ ಸಂಪೂರ್ಣವಾಗಿ ಮನವರಿಕೆ ಆಗಿರಲಿಲ್ಲ. ಆದರೆ, ನಿಯಮಿತ ಚುನಾವಣೆಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳು ಈ ನಿಟ್ಟಿನಲ್ಲಿ ಭಾರತದ ನಿಲುವಿಗೆ ಬಲ ಒದಗಿಸಿದ್ದವು. ಈ ಹೊತ್ತಿನಲ್ಲಿ, ಚುನಾಯಿತ ಜನಪ್ರತಿನಿಧಿಗಳನ್ನೇ ಯಾವುದೇ ಆರೋಪ ಇಲ್ಲದೇ ತಿಂಗಳುಗಟ್ಟಲೆ ಬಂಧನದಲ್ಲಿ ಇರಿಸಿರುವಾಗ, ನಮಗೀಗ ಯಾವ ನೈತಿಕತೆ ಉಳಿದಿದೆ?

ನ್ಯಾಯಾಲಯದ ಆದೇಶದಂತೆ ಅಸ್ಸಾಮಿನಲ್ಲಿ ನಡೆದ ಇಡೀ ಎನ್‌ಆರ್‌ಸಿ ಪ್ರಕ್ರಿಯೆಯು ಉಂಟುಮಾಡಿದ ಮಹಾ ಗೊಂದಲ, ಗೋಜಲುಗಳು ಅದರ ಪರಿಣಾಮಗಳ ಬಗ್ಗೆ ಮೋದಿ ಸರಕಾರಕ್ಕೆ ಮನವರಿಕೆ ಮಾಡಬೇಕಾಗಿತ್ತು. ಆದರೆ, ಅದಕ್ಕೆ ಬದಲಾಗಿ ಸರಕಾರವು ಅದನ್ನು ಇಡೀ ದೇಶದಲ್ಲಿ ನಡೆಸುವುದಾಗಿ ಘೋಷಿಸಿತು. ಪರಿಣಾಮವಾಗಿ ಅಸ್ಸಾಮಿನಲ್ಲಿ 19 ಲಕ್ಷ ಜನರು ಈಗ ಭಾರತೀಯ ಪೌರತ್ವ ಕಳೆದುಕೊಳ್ಳುವ ಭಯವನ್ನು ಎದುರಿಸುತ್ತಿರುವುದು ಮಾತ್ರವಲ್ಲ; ಲಕ್ಷಾಂತರ ಇತರ ಭಾರತೀಯರೂ ಇದೇ ಪರಿಸ್ಥಿತಿಯನ್ನು ಎದುರು ನೋಡುತ್ತಿದ್ದಾರೆ.

ಅಸ್ಸಾಮಿನ ಎನ್‌ಆರ್‌ಸಿ ಬಂಧನ ಕೇಂದ್ರಗಳ ಅಮಾನವೀಯತೆ

ಇದು ದೇಶದಾದ್ಯಂತ ಹುಟ್ಟುಹಾಕಿದ ವ್ಯಾಪಕ ಪ್ರತಿಭಟನೆಗಳು ಸರಕಾರಕ್ಕೆ ಈ ವಿನಾಶಕಾರಿ ಕ್ರಮವನ್ನು ಹಿಂತೆಗೆದುಕೊಳ್ಳಲು ಪ್ರೇರಣೆ ನೀಡಬೇಕಾಗಿತ್ತು. ಆದರೆ, ಯಾವುದನ್ನೂ ಯೋಚಿಸದೇ ಮುಂದಡಿಯಿಟ್ಟು, ನಂತರ ಕೂಡಾ ಎಂದಿಗೂ ಮರುಚಿಂತನೆ ಮಾಡದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇದನ್ನು ಮಾಡುವ. ಸಾಧ್ಯತೆಯಿಲ್ಲ. ಏಕೆಂದರೆ, ಸರಕಾರದ ಮೇಲಿನ ಕ್ರಮಗಳೆಲ್ಲವುಗಳಲ್ಲಿ ಕೇವಲ ಪೂರ್ವಯೋಜನೆ ಮಾತ್ರವಲ್ಲ; ಎಳ್ಳಷ್ಟು ಮಾನವೀಯತೆಯೂ ಕಾಣುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಅವರ ಸ್ಥಾನ ದಲ್ಲಿ ಆಲೋಚನೆ ಮಾಡಿ ನಿಮ್ಮ ಮನಸಿಗೆ ಬಂದಿದ್ದವು ಬರೆದು ಹಾಕಬೇಡಿ ಅವರು ಏನು ಅಂತ ಜನಕ್ಕೆ ಗೊತ್ತು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...