Homeಮುಖಪುಟಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ

ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ

ಈ ಸರಕಾರ ಮತ್ತೆ ಅಧಿಕಾರಕ್ಕೆ ಬಂದ ಒಂದೇ ವರ್ಷದ ಒಳಗೆ ಒಂದೇ ಹೊತ್ತಿಗೆ ಬಹುದೊಡ್ಡ ಸಂಖ್ಯೆಯ ಜನರಿಗೆ ಭಾರೀ ಸಂಕಷ್ಟಗಳನ್ನು ಒಡ್ಡಿದ ಮೂರನೆಯ ಅಧಿಕೃತ ಕೃತ್ಯವಿದು.

- Advertisement -
- Advertisement -

ಕೊರೊನಾ ಪಿಡುಗನ್ನು ಎದುರಿಸಲು ಹೇರಲಾದ ತಯಾರಿಯೇ ಇಲ್ಲದ ಸಂಪೂರ್ಣ ಲಾಕ್‌ಡೌನ್ ಸೇರಿದಂತೆ ನರೇಂದ್ರ ಮೋದಿ ಸರಕಾರವು ಈ ತನಕ ತೆಗೆದುಕೊಂಡ ನಿರಂಕುಶ ಕ್ರಮಗಳೆಲ್ಲವೂ ಕೋಟ್ಯಂತರ ಜನರಿಗೆ ಬಹಳಷ್ಟು ಸಂಕಟವನ್ನೊಡ್ಡಿವೆ. ಅರೆಬೆಂದ ನಿರ್ಧಾರಗಳನ್ನು ಜಾರಿ ಮಾಡುತ್ತಿರುವ ಸರಕಾರದ ಬಳಿ ನಿರ್ದಿಷ್ಟ ಕಾರ್ಯತಂತ್ರ ಇದ್ದಂತೆ ಕಾಣುವುದಿಲ್ಲ. ಅಷ್ಟೇ ಅಲ್ಲ, ಮಾನವೀಯತೆಯ ಲವಲೇಶವೂ ಕಾಣುವುದಿಲ್ಲ.

ಸಿದ್ಧಾರ್ಥ ಭಾಟಿಯಾ

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ರಾಷ್ಟ್ರೀಯ ಪೌರತ್ವ ನೋಂದಣಿ (ತಿದ್ದುಪಡಿ) ಕಾಯಿದೆಯ ಪ್ರಕ್ರಿಯೆಯು ಭಾರತದ ಲಕ್ಷಾಂತರ ಜನರನ್ನು ದೇಶರಹಿತರನ್ನಾಗಿ ಮಾಡಬಹುದಿತ್ತು. ಏಕಾಏಕಿಯಾಗಿ ಲಾಕ್‌ಡೌನ್ ಹೇರಲಾದ ಕೆಲವೇ ದಿನಗಳಲ್ಲಿ ಲೆಕ್ಕವೇ ಇಲ್ಲದಷ್ಟು ಭಾರತೀಯರು ಮನೆಯೇ ಇಲ್ಲದವರಾಗಿದ್ದಾರೆ. ತಾವು ಎಲ್ಲಿದ್ದೆವೋ ಅಲ್ಲಿಯೇ ಅವರು ವಸ್ತುಶಃ ಕಟ್ಟುಬಿದ್ದಿದ್ದಾರೆ; ಅವರಿಗೆ ಹೋಗಲು ಯಾವುದೇ ಜಾಗವಿಲ್ಲ. ಅವರು ತಮ್ಮ ಹಿಂದಿನ ವಾಸಸ್ಥಾನವನ್ನು ಬಿಟ್ಟುಹೋದವರು ಮತ್ತು ಅವರೀಗ ಹಳ್ಳಿಗಳಲ್ಲಿರುವ ತಮ್ಮ ಮನೆಗಳನ್ನು ತಲಪುವಂತಿಲ್ಲ. ಏಕೆಂದರೆ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚಿವೆ.

ಅವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಕೆಲವು ರಾಜಕಾರಣಿಗಳು ಬಯಸಿದ್ದಾರೆ. ಇನ್ನು, ಆಳುವ ಪಕ್ಷದ ಕೆಲವು ನಾಯಕರು ಈ ಬಡಪಾಯಿಗಳೇ ಇದಕ್ಕೆ ಹೊಣೆಗಾರರು ಮತ್ತು ಈ ಕಡ್ಡಾಯ ರಜೆಯ ಲಾಭಪಡೆದು ತಮ್ಮ ಮನೆಗಳಿಗೆ ಹೋಗಬಯಸುವ ಬೇಜವಾಬ್ದಾರಿ ಜನರು ಎಂದು ಭಾವಿಸಿದ್ದಾರೆ.

ಈ ವಲಸೆ ಕಾರ್ಮಿಕರ ಬಳಿ ಆಹಾರವಿಲ್ಲ, ಆಶ್ರಯವಿಲ್ಲ, ಆಶಾವಾದವೂ ಇಲ್ಲ. ಅವರಲ್ಲಿ ಅನೇಕರು ಕೆಲಸ ಕಳೆದುಕೊಂಡವರು; ಯಾಕೆಂದರೆ, ಅವರ ಸಂಬಳವನ್ನು ಮುಂದುವರಿಸಲು ಅವರ ಮಾಲಕರಿಗೆ ಸಾಧ್ಯವಿಲ್ಲ. ಇಂತಹಾ ಪರಿಸ್ಥಿತಿಯಲ್ಲಿ ಆಹಾರ ಕೊಳ್ಳಲಾಗಲಿ, ಬಾಡಿಗೆ ನೀಡಲಾಗಲಿ ಅವರಿಗೆ ಸಾಧ್ಯವಾಗುವಂತಿರಲಿಲ್ಲ. ತಾವು ಕಾಯಿಲೆ ಬೀಳಬಹುದು ಎಂಬ ಭಯವೂ ಅವರನ್ನು ಕಾಡುತ್ತಿರಬಹುದು. ಇಂತಹಾ ಸಂದರ್ಭದಲ್ಲಿ ತಾವು ಸುರಕ್ಷಿತವಾಗಿರಬಹುದಾದ ಒಂದೇ ಒಂದು ಸ್ಥಳಕ್ಕೆ- ಅಂದರೆ, ತಮ್ಮತಮ್ಮ ಮನೆಗಳಿಗೆ ಅವರು ಹೊರಟರು. ಆದರೀಗ ಗಡಿಗಳನ್ನು ಮುಚ್ಚಿರುವುದರಿಂದ ಅದೂ ದೂರದ ಕನಸಾಗಿದೆ. ಜನರ ಗುಂಪುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇವು ಮಾನವೀಯ ದುರಂತವೊಂದು ರೂಪುಗೊಳ್ಳುತ್ತಿರುವುದರ ಲಕ್ಷಣಗಳು.

ಇದು ಮೋದಿ ಉಂಟು ಮಾಡಿದ “ಸಾಮಾಜಿಕ ಅಂತರ”

ಈ ಸರಕಾರ ಮತ್ತೆ ಅಧಿಕಾರಕ್ಕೆ ಬಂದ ಒಂದೇ ವರ್ಷದ ಒಳಗೆ ಒಂದೇ ಹೊತ್ತಿಗೆ ಬಹುದೊಡ್ಡ ಸಂಖ್ಯೆಯ ಜನರಿಗೆ ಭಾರೀ ಸಂಕಷ್ಟಗಳನ್ನು ಒಡ್ಡಿದ ಮೂರನೆಯ ಅಧಿಕೃತ ಕೃತ್ಯವಿದು. ಸ್ವಲ್ಪ ಹಿಂದೆ ಹೋದರೆ, ನೋಟು ಅಮಾನ್ಯೀಕರಣವನ್ನೂ ಈ ಪಟ್ಟಿಗೆ ಸೇರಿಸಿಕೊಳ್ಳಬಹುದು. ಈ  ಪ್ರತಿಯೊಂದು ನಿರಂಕುಶ ನಿರ್ಧಾರಗಳಲ್ಲಿ ಸಮಾನ ಅಂಶಗಳಿವೆ. ಅವೆಂದರೆ, ಯಾವುದೇ ಪೂರ್ವಯೋಜನೆ ಇಲ್ಲದಿರುವುದು ಮತ್ತು ಅಧ್ವಾನದ ಅನುಷ್ಟಾನ. ಇಲ್ಲಿ ಇನ್ನೊಂದು ಕಣ್ಣಿಗೆ ರಾಚುವ ಅಂಶವಿದೆ- ಅದೆಂದರೆ, ಮಾನವ ಸಂಕಷ್ಟಗಳ ಕುರಿತು ಸಂಪೂರ್ಣ ಅಸಡ್ಡೆ.

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯಂತಹ ಕೆಲವೇ ಕ್ರಮಗಳನ್ನು ಬಿಟ್ಟರೆ, ಭಾರತದಲ್ಲಿ ಸಾಮಾಜಿಕ ಸುರಕ್ಷೆಯ ಯಾವುದೇ ಬಲೆ ಅಥವಾ ವ್ಯವಸ್ಥೆ ಇಲ್ಲ. ಏನಾದರೊಂದು ಸ್ವಲ್ಪ ಮಟ್ಟಿಗೆ ಇದ್ದರೆ, ಅದೂ ಕೂಡಾ ಈಗ ಅಸ್ತವ್ಯಸ್ತಗೊಂಡಿದೆ. ಧೋರಣೆಗಳು ನಮ್ಮಲ್ಲಿ ಬಡವರ ಅಗತ್ಯಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದೇ ಅಪರೂಪ. ಆದರೆ, ನಾವೀಗ ಸಂಪೂರ್ಣವಾದ ಅಸಹಾನುಭೂತಿಯನ್ನಷ್ಟೇ ನೋಡುತ್ತಿದ್ದೇವೆ. ಈ ಲಾಕ್‌ಡೌನ್‌ ನಂತರ ಅತ್ಯಂತ ಹೆಚ್ಚು ಸಂಕಷ್ಟಕ್ಕೆ ಒಳಗಾದವರನ್ನೇ ಸಮಾನ ಒಳಿತನ್ನು ಕುರಿತು ಯೋಚಿಸದ ದೇಶವಿರೋಧಿಗಳೆಂಬಂತೆ ಚಿತ್ರಿಸುವ ಘೋರ ಅಮಾವೀಯತೆಯನ್ನು ತೋರಿಸಲಾಗುತ್ತಿದೆ.

ಮೋದಿ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವೂ ಅಗತ್ಯವಾಗಿದ್ದು, ಅಂತಿಮವಾಗಿ ದೇಶಕ್ಕೆ ಲಾಭ ತಂದುಕೊಡುವಂತವುಗಳು ಎಂದು ಆತ ಮತ್ತಾತನ ಬೆಂಬಲಿಗರು ವಾದಿಸಬಹುದು. ಆ ಕುರಿತು ಅವರು ಆಗಲೇ ನ್ಯಾಯತೀರ್ಮಾನ ಮಾಡಿ ಆಗಿದೆ. ಆದರೂ, ನಾವು ಅವುಗಳನ್ನು ಒಂದೊಂದಾಗಿ ಮತ್ತು ಚುಟುಕಾಗಿ ಪರಿಶೀಲಿಸೋಣ.

ಕಪ್ಪು ಹಣವನ್ನು ನಿವಾರಿಸಲು ಅಮಾನ್ಯೀಕರಣ ಅತ್ಯಗತ್ಯವಾಗಿತ್ತು ಎಂದು ವಾದಿಸಲಾಯಿತು. (ಅದು ಹೇಗೆ ಭಯೋತ್ಪಾದನೆಯ ಬೆನ್ನು ಮೂಳೆ ಮುರಿಯಲಿದೆ ಎಂದೂ ಹೇಳಲಾಯಿತು. ವಾಸ್ತವವಾಗಿ ಆ ಬಳಿಕವೇ ಅನೇಕ ಗಂಭೀರ ಭಯೋತ್ಪಾದಕ ದಾಳಿಗಳು ನಡೆದದ್ದು!) ಅದರ ಪರಿಣಾಮ ಏನಾಯಿತು ಎಂಬುದನ್ನು ನಾವೆಲ್ಲರೂ ಕಂಡಿದ್ದೇವೆ- ಅಲ್ಪಾವಧಿಗೆ ಮಾತ್ರವಲ್ಲ; ದೀರ್ಘಾವಧಿಗೂ ಕೂಡಾ. ಅದರಿಂದ ಬಡವರೇ ಅತ್ಯಂತ ಹೆಚ್ಚು ಬಾಧಿತರಾದರು. ಈಗಲೂ ನಗದು ವ್ಯವಹಾರ ಮತ್ತು ಕಪ್ಪು ಹಣ ಹಾಗೆಯೇ ಇದೆ. ಹಾಗಿರುವಾಗ ಮೋದಿ ಜನರಿಗೆ ವ್ಯರ್ಥವಾಗಿ ಅಷ್ಟೊಂದು ಪೀಡೆ ನೀಡಿದ್ದಾದರೂ ಏಕೆ?

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370ನ್ನು ರದ್ದುಗೊಳಿಸಿದ ಬಳಿಕ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಹೇರಲಾಯಿತು. ಇಂಟರ್ನೆಟ್ ಕೂಡಾ ಸ್ಥಗಿತಗೊಳಿಸಲಾಯಿತು. ಇದನ್ನು ಮೋದಿಯ ಮೇಲೆ ಅಂತಹಾ ಪ್ರೀತಿ ಇಲ್ಲದವರು ಕೂಡಾ ಕೇವಲ ಹುಸಿ ದೇಶಪ್ರೇಮದ ಬಲೆಗೆ ಬಿದ್ದು ಹೊಗಳಿದರು. ಆದರೆ, ಇದು ಮತ್ತೆ ಎಪ್ಪತ್ತು ಲಕ್ಷ ಜನಸಾಮಾನ್ಯರಿಗೆ ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿತು.

ಮೋದಿಯ ಕಾಶ್ಮೀರ ಲಾಕ್‌ಡೌನ್ ಅಮಾನವೀಯತೆ

“ಕಾಶ್ಮೀರವು ಕೊನೆಗೂ ಭಾರತದ ಭಾಗವಾಯಿತು” ಎಂದು ಹೊರಗೆ ಕುಳಿತು, ಅತಿರೇಕದ ಹುಸಿ ದೇಶಪ್ರೇಮ ತೋರುವ ಅನಿವಾಸಿ ಭಾರತೀಯರು ಘೋಷಿಸಿದರೂ, ಈ ಕ್ರಮವು ವ್ಯಾಪಕವಾದ ಅಂತರರಾಷ್ಟ್ರೀಯ ಖಂಡನೆಗೆ ಗುರಿಯಾಯಿತು. ಜಗತ್ತಿಗೆ ಕಾಶ್ಮೀರದ ಮೇಲೆ ಭಾರತದ ಹಕ್ಕಿನ ಕುರಿತು ಎಂದಿಗೂ ಸಂಪೂರ್ಣವಾಗಿ ಮನವರಿಕೆ ಆಗಿರಲಿಲ್ಲ. ಆದರೆ, ನಿಯಮಿತ ಚುನಾವಣೆಗಳು ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳು ಈ ನಿಟ್ಟಿನಲ್ಲಿ ಭಾರತದ ನಿಲುವಿಗೆ ಬಲ ಒದಗಿಸಿದ್ದವು. ಈ ಹೊತ್ತಿನಲ್ಲಿ, ಚುನಾಯಿತ ಜನಪ್ರತಿನಿಧಿಗಳನ್ನೇ ಯಾವುದೇ ಆರೋಪ ಇಲ್ಲದೇ ತಿಂಗಳುಗಟ್ಟಲೆ ಬಂಧನದಲ್ಲಿ ಇರಿಸಿರುವಾಗ, ನಮಗೀಗ ಯಾವ ನೈತಿಕತೆ ಉಳಿದಿದೆ?

ನ್ಯಾಯಾಲಯದ ಆದೇಶದಂತೆ ಅಸ್ಸಾಮಿನಲ್ಲಿ ನಡೆದ ಇಡೀ ಎನ್‌ಆರ್‌ಸಿ ಪ್ರಕ್ರಿಯೆಯು ಉಂಟುಮಾಡಿದ ಮಹಾ ಗೊಂದಲ, ಗೋಜಲುಗಳು ಅದರ ಪರಿಣಾಮಗಳ ಬಗ್ಗೆ ಮೋದಿ ಸರಕಾರಕ್ಕೆ ಮನವರಿಕೆ ಮಾಡಬೇಕಾಗಿತ್ತು. ಆದರೆ, ಅದಕ್ಕೆ ಬದಲಾಗಿ ಸರಕಾರವು ಅದನ್ನು ಇಡೀ ದೇಶದಲ್ಲಿ ನಡೆಸುವುದಾಗಿ ಘೋಷಿಸಿತು. ಪರಿಣಾಮವಾಗಿ ಅಸ್ಸಾಮಿನಲ್ಲಿ 19 ಲಕ್ಷ ಜನರು ಈಗ ಭಾರತೀಯ ಪೌರತ್ವ ಕಳೆದುಕೊಳ್ಳುವ ಭಯವನ್ನು ಎದುರಿಸುತ್ತಿರುವುದು ಮಾತ್ರವಲ್ಲ; ಲಕ್ಷಾಂತರ ಇತರ ಭಾರತೀಯರೂ ಇದೇ ಪರಿಸ್ಥಿತಿಯನ್ನು ಎದುರು ನೋಡುತ್ತಿದ್ದಾರೆ.

ಅಸ್ಸಾಮಿನ ಎನ್‌ಆರ್‌ಸಿ ಬಂಧನ ಕೇಂದ್ರಗಳ ಅಮಾನವೀಯತೆ

ಇದು ದೇಶದಾದ್ಯಂತ ಹುಟ್ಟುಹಾಕಿದ ವ್ಯಾಪಕ ಪ್ರತಿಭಟನೆಗಳು ಸರಕಾರಕ್ಕೆ ಈ ವಿನಾಶಕಾರಿ ಕ್ರಮವನ್ನು ಹಿಂತೆಗೆದುಕೊಳ್ಳಲು ಪ್ರೇರಣೆ ನೀಡಬೇಕಾಗಿತ್ತು. ಆದರೆ, ಯಾವುದನ್ನೂ ಯೋಚಿಸದೇ ಮುಂದಡಿಯಿಟ್ಟು, ನಂತರ ಕೂಡಾ ಎಂದಿಗೂ ಮರುಚಿಂತನೆ ಮಾಡದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇದನ್ನು ಮಾಡುವ. ಸಾಧ್ಯತೆಯಿಲ್ಲ. ಏಕೆಂದರೆ, ಸರಕಾರದ ಮೇಲಿನ ಕ್ರಮಗಳೆಲ್ಲವುಗಳಲ್ಲಿ ಕೇವಲ ಪೂರ್ವಯೋಜನೆ ಮಾತ್ರವಲ್ಲ; ಎಳ್ಳಷ್ಟು ಮಾನವೀಯತೆಯೂ ಕಾಣುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಅವರ ಸ್ಥಾನ ದಲ್ಲಿ ಆಲೋಚನೆ ಮಾಡಿ ನಿಮ್ಮ ಮನಸಿಗೆ ಬಂದಿದ್ದವು ಬರೆದು ಹಾಕಬೇಡಿ ಅವರು ಏನು ಅಂತ ಜನಕ್ಕೆ ಗೊತ್ತು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...