Homeಮುಖಪುಟರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

- Advertisement -
- Advertisement -

ನ್ಯಾಯಾಧೀಶರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಕೊಳ್ಳುವಂತೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೋರ್ಟ್‌ ಮಂಗಳವಾರ ಕೇಳಿದ್ದು, ಈ ವಿಷಯವನ್ನು ಕೇವಲ ರಾಜ್ಯಗಳಿಗೆ ಬಿಡಬಾರದು ಎಂದು ಹೇಳಿದೆ. ಕಳೆದ ತಿಂಗಳು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶರ ಕೊಲೆ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.

ಸುಪ್ರೀಂಕೋರ್ಟ್‌‌ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನ್ಯಾಯಾಧೀಶರ ಭದ್ರತಾ ಕ್ರಮಗಳ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸದ ರಾಜ್ಯಗಳಿಗೆ ಎಚ್ಚರಿಕೆಯನ್ನೂ ಅದು ನೀಡಿದೆ.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

“ತೆಗೆದುಕೊಳ್ಳುತ್ತಿರುವ ಕ್ರಮಗಳು ಎಲ್ಲವೂ ಚೆನ್ನಾಗಿದೆ ಎಂಬಂತಹ ಚಿತ್ರಣಗಳನ್ನು ರಾಜ್ಯಗಳು ನೀಡುತ್ತಿವೆ . ಆದರೆ, ಅದರ ಹೊರತಾಗಿಯೂ, ನ್ಯಾಯಾಂಗದ ಅಧಿಕಾರಿಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ರಾಜ್ಯಗಳು ಸಿಸಿಟಿವಿ ನಿಧಿಯ ಕೊರತೆಯನ್ನು ಉಲ್ಲೇಖಿಸುತ್ತಿವೆ. ಆದರೆ ಸಿಸಿಟಿವಿಗಳು ಅಪರಾಧದ ದಾಖಲೆ ಮಾತ್ರ ಮಾಡುತ್ತದೆ. ಅಪರಾಧಿಗಳು ಆಕ್ರಮಣ ಮಾಡುವುದನ್ನು ತಡೆಯುವುದಾಗಲಿ, ಬೆದರಿಕೆಗಳನ್ನು ತಡೆಯುವುದಕ್ಕಾಗಲಿ ಅವುಗಳಿಗೆ ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯವು ರಾಜ್ಯಗಳಿಗೆ ಒಂದು ವಾರದ ಕಾಲಾವಕಾಶವನ್ನು ನೀಡಿದ್ದು, ಒಂದು ವಾರದಲ್ಲಿ ಪರಿಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸದಿದ್ದಲ್ಲಿ 1 ಲಕ್ಷ ರೂ. ದಂಡದ ಎಚ್ಚರಿಕೆಯನ್ನು ನೀಡಿದೆ. ಒಂದು ವಾರದಲ್ಲಿ ರಾಜ್ಯಗಳು ತಮ್ಮ ವರದಿಗಳನ್ನು ಸಲ್ಲಿಸದಿದ್ದರೆ ಮುಖ್ಯ ಕಾರ್ಯದರ್ಶಿಗಳು ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ಜುಲೈ 28 ರಂದು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ (49) ಅವರು ಬೆಳಗಿನ ಜಾವ ಜಾಗಿಂಗ್‌ ಮಾಡುತ್ತಿದ್ದಾಗ ಆಟೋ ಡಿಕ್ಕಿ ಹೊಡೆದು ಕೊಲ್ಲಲ್ಪಟ್ಟರು.

ಪ್ರಕರಣವು ಮೊದಲಿಗೆ ಹಿಟ್ ಅಂಡ್ ರನ್ ಎಂದು ಹೇಳಲಾಗಿತ್ತು, ಆದರೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಪ್ರಕರಣವು ಇನ್ನೊಂದು ಮಗ್ಗುಲಿಗೆ ಹೊರಳಿತು.

ಉತ್ತಮ್ ಆನಂದ್‌ ಅವರು ಧನ್ಬಾದ್‌ನ ಅನೇಕ ಮಾಫಿಯಾ ಹತ್ಯಾ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದರು, ಅದರಲ್ಲಿ ಅವರು ಇಬ್ಬರು ದರೋಡೆಕೋರರ ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ್ದರು. ಜೊತೆಗೆ ಶಾಸಕರ ಆಪ್ತರೊಬ್ಬರನ್ನು ಒಳಗೊಂಡ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...