Homeಮುಖಪುಟರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

- Advertisement -
- Advertisement -

ನ್ಯಾಯಾಧೀಶರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಕೊಳ್ಳುವಂತೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೋರ್ಟ್‌ ಮಂಗಳವಾರ ಕೇಳಿದ್ದು, ಈ ವಿಷಯವನ್ನು ಕೇವಲ ರಾಜ್ಯಗಳಿಗೆ ಬಿಡಬಾರದು ಎಂದು ಹೇಳಿದೆ. ಕಳೆದ ತಿಂಗಳು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶರ ಕೊಲೆ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.

ಸುಪ್ರೀಂಕೋರ್ಟ್‌‌ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನ್ಯಾಯಾಧೀಶರ ಭದ್ರತಾ ಕ್ರಮಗಳ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸದ ರಾಜ್ಯಗಳಿಗೆ ಎಚ್ಚರಿಕೆಯನ್ನೂ ಅದು ನೀಡಿದೆ.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

“ತೆಗೆದುಕೊಳ್ಳುತ್ತಿರುವ ಕ್ರಮಗಳು ಎಲ್ಲವೂ ಚೆನ್ನಾಗಿದೆ ಎಂಬಂತಹ ಚಿತ್ರಣಗಳನ್ನು ರಾಜ್ಯಗಳು ನೀಡುತ್ತಿವೆ . ಆದರೆ, ಅದರ ಹೊರತಾಗಿಯೂ, ನ್ಯಾಯಾಂಗದ ಅಧಿಕಾರಿಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ರಾಜ್ಯಗಳು ಸಿಸಿಟಿವಿ ನಿಧಿಯ ಕೊರತೆಯನ್ನು ಉಲ್ಲೇಖಿಸುತ್ತಿವೆ. ಆದರೆ ಸಿಸಿಟಿವಿಗಳು ಅಪರಾಧದ ದಾಖಲೆ ಮಾತ್ರ ಮಾಡುತ್ತದೆ. ಅಪರಾಧಿಗಳು ಆಕ್ರಮಣ ಮಾಡುವುದನ್ನು ತಡೆಯುವುದಾಗಲಿ, ಬೆದರಿಕೆಗಳನ್ನು ತಡೆಯುವುದಕ್ಕಾಗಲಿ ಅವುಗಳಿಗೆ ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯವು ರಾಜ್ಯಗಳಿಗೆ ಒಂದು ವಾರದ ಕಾಲಾವಕಾಶವನ್ನು ನೀಡಿದ್ದು, ಒಂದು ವಾರದಲ್ಲಿ ಪರಿಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸದಿದ್ದಲ್ಲಿ 1 ಲಕ್ಷ ರೂ. ದಂಡದ ಎಚ್ಚರಿಕೆಯನ್ನು ನೀಡಿದೆ. ಒಂದು ವಾರದಲ್ಲಿ ರಾಜ್ಯಗಳು ತಮ್ಮ ವರದಿಗಳನ್ನು ಸಲ್ಲಿಸದಿದ್ದರೆ ಮುಖ್ಯ ಕಾರ್ಯದರ್ಶಿಗಳು ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ಜುಲೈ 28 ರಂದು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ (49) ಅವರು ಬೆಳಗಿನ ಜಾವ ಜಾಗಿಂಗ್‌ ಮಾಡುತ್ತಿದ್ದಾಗ ಆಟೋ ಡಿಕ್ಕಿ ಹೊಡೆದು ಕೊಲ್ಲಲ್ಪಟ್ಟರು.

ಪ್ರಕರಣವು ಮೊದಲಿಗೆ ಹಿಟ್ ಅಂಡ್ ರನ್ ಎಂದು ಹೇಳಲಾಗಿತ್ತು, ಆದರೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಪ್ರಕರಣವು ಇನ್ನೊಂದು ಮಗ್ಗುಲಿಗೆ ಹೊರಳಿತು.

ಉತ್ತಮ್ ಆನಂದ್‌ ಅವರು ಧನ್ಬಾದ್‌ನ ಅನೇಕ ಮಾಫಿಯಾ ಹತ್ಯಾ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದರು, ಅದರಲ್ಲಿ ಅವರು ಇಬ್ಬರು ದರೋಡೆಕೋರರ ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ್ದರು. ಜೊತೆಗೆ ಶಾಸಕರ ಆಪ್ತರೊಬ್ಬರನ್ನು ಒಳಗೊಂಡ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....