Homeಮುಖಪುಟಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

- Advertisement -
- Advertisement -

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಜನರು ಕೊರೊನಾ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಸರಿಸಿದರೆ ಮತ್ತು ಕೊರೊನಾ ವ್ಯಾಕ್ಸಿನೇಷನ್ ತೆಗೆದುಕೊಂಡರೆ, ಮುಂಬರುವ ಯಾವುದೇ ರೂಪಾಂತರಿ ವೈರಸ್‌ಗಳ ವಿರುದ್ಧ ಹೋರಾಡಬಹುದು ಮತ್ತು ಸುರಕ್ಷಿತವಾಗಿರಬಹುದು ಎಂದು ಡಾ.ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

“ಡೆಲ್ಟಾ ಪ್ಲಸ್ ರೂಪಾಂತರಿಯು ಹೆಚ್ಚು ಸಾಂಕ್ರಾಮಿಕ, ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಮತ್ತು  ರೋಗನಿರೋಧಕ ಶಕ್ತಿಯನ್ನು ಮೀರಿ ಸೋಂಕಿತರನ್ನಾಗಿಸುತ್ತದೆ ಎಂದು ಸೂಚಿಸಲು ಹೆಚ್ಚಿನ ಡೇಟಾ ಇಲ್ಲ. ಆದರೆ ನಾವು ಕೊರೊಬಾ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿದರೆ ಮತ್ತು ಲಸಿಕೆ ತೆಗೆದುಕೊಂಡರೆ, ಯಾವುದೇ ರೂಪಾಂತರಿ ವೈರಸ್‌ಗಳಿಂದ ವಿರುದ್ಧ ಸುರಕ್ಷಿತವಾಗಿರುತ್ತೇವೆ” ಎಂದು ಡಾ ಗುಲೇರಿಯಾ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ವೈದ್ಯರ ದಿನದಂದು ಏಮ್ಸ್ ನಿರ್ದೇಶಕರ ರಂದೀಪ್ ಗುಲೇರಿಯಾ ನೆನಪಿಸಿಕೊಂಡಿದ್ದಾರೆ.

“ಕಳೆದ ಒಂದು ವರ್ಷದಿಂದ ವೈದ್ಯರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಕೆಲಸವನ್ನು ನಾವು ಪ್ರಶಂಸಿಸಬೇಕು. ಈ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರನ್ನು ಸಹ ನಾವು ನೆನಪಿಸಿಕೊಳ್ಳಬೇಕು. ಅವರನ್ನು ನೆನಪಿಸಿಕೊಳ್ಳುವಾಗ, ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಬೇಕು” ಎಂದಿದ್ದಾರೆ.

“ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಕಡಿಮೆ ಒತ್ತಡ ಉಂಟಾಗುವಂತೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು “ಎಂದು ಹೇಳಿದ್ದಾರೆ.

ಇದರ ಜೊತೆಗೆ ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿ, ಇದು ವೈದ್ಯಕೀಯ ಸಮುದಾಯಕ್ಕೆ ನಿರಾಶಾದಾಯಕವಾಗಿದೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ.

“ವೈದ್ಯರು ಮಾಡುತ್ತಿರುವ ಕೆಲಸವನ್ನು ನಾವು ಮೆಚ್ಚಬೇಕು ಮತ್ತು ಗೌರವಿಸಬೇಕು ಮತ್ತು ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಬೇಕು. ಇದು ವೈದ್ಯಕೀಯ ಸಮುದಾಯಕ್ಕೆ ಧೈರ್ಯಗೆಡಿಸುವ ಒಂದು ಕೃತ್ಯವಾಗಿದೆ” ಎಂದು ಏಮ್ಸ್ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು, ’ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...