Homeಮುಖಪುಟಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

- Advertisement -
- Advertisement -

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಜನರು ಕೊರೊನಾ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಸರಿಸಿದರೆ ಮತ್ತು ಕೊರೊನಾ ವ್ಯಾಕ್ಸಿನೇಷನ್ ತೆಗೆದುಕೊಂಡರೆ, ಮುಂಬರುವ ಯಾವುದೇ ರೂಪಾಂತರಿ ವೈರಸ್‌ಗಳ ವಿರುದ್ಧ ಹೋರಾಡಬಹುದು ಮತ್ತು ಸುರಕ್ಷಿತವಾಗಿರಬಹುದು ಎಂದು ಡಾ.ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

“ಡೆಲ್ಟಾ ಪ್ಲಸ್ ರೂಪಾಂತರಿಯು ಹೆಚ್ಚು ಸಾಂಕ್ರಾಮಿಕ, ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಮತ್ತು  ರೋಗನಿರೋಧಕ ಶಕ್ತಿಯನ್ನು ಮೀರಿ ಸೋಂಕಿತರನ್ನಾಗಿಸುತ್ತದೆ ಎಂದು ಸೂಚಿಸಲು ಹೆಚ್ಚಿನ ಡೇಟಾ ಇಲ್ಲ. ಆದರೆ ನಾವು ಕೊರೊಬಾ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿದರೆ ಮತ್ತು ಲಸಿಕೆ ತೆಗೆದುಕೊಂಡರೆ, ಯಾವುದೇ ರೂಪಾಂತರಿ ವೈರಸ್‌ಗಳಿಂದ ವಿರುದ್ಧ ಸುರಕ್ಷಿತವಾಗಿರುತ್ತೇವೆ” ಎಂದು ಡಾ ಗುಲೇರಿಯಾ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ವೈದ್ಯರ ದಿನದಂದು ಏಮ್ಸ್ ನಿರ್ದೇಶಕರ ರಂದೀಪ್ ಗುಲೇರಿಯಾ ನೆನಪಿಸಿಕೊಂಡಿದ್ದಾರೆ.

“ಕಳೆದ ಒಂದು ವರ್ಷದಿಂದ ವೈದ್ಯರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಕೆಲಸವನ್ನು ನಾವು ಪ್ರಶಂಸಿಸಬೇಕು. ಈ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರನ್ನು ಸಹ ನಾವು ನೆನಪಿಸಿಕೊಳ್ಳಬೇಕು. ಅವರನ್ನು ನೆನಪಿಸಿಕೊಳ್ಳುವಾಗ, ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಬೇಕು” ಎಂದಿದ್ದಾರೆ.

“ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಕಡಿಮೆ ಒತ್ತಡ ಉಂಟಾಗುವಂತೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು “ಎಂದು ಹೇಳಿದ್ದಾರೆ.

ಇದರ ಜೊತೆಗೆ ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿ, ಇದು ವೈದ್ಯಕೀಯ ಸಮುದಾಯಕ್ಕೆ ನಿರಾಶಾದಾಯಕವಾಗಿದೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ.

“ವೈದ್ಯರು ಮಾಡುತ್ತಿರುವ ಕೆಲಸವನ್ನು ನಾವು ಮೆಚ್ಚಬೇಕು ಮತ್ತು ಗೌರವಿಸಬೇಕು ಮತ್ತು ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಬೇಕು. ಇದು ವೈದ್ಯಕೀಯ ಸಮುದಾಯಕ್ಕೆ ಧೈರ್ಯಗೆಡಿಸುವ ಒಂದು ಕೃತ್ಯವಾಗಿದೆ” ಎಂದು ಏಮ್ಸ್ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು, ’ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...