Homeಮುಖಪುಟಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

- Advertisement -
- Advertisement -

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಜನರು ಕೊರೊನಾ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಸರಿಸಿದರೆ ಮತ್ತು ಕೊರೊನಾ ವ್ಯಾಕ್ಸಿನೇಷನ್ ತೆಗೆದುಕೊಂಡರೆ, ಮುಂಬರುವ ಯಾವುದೇ ರೂಪಾಂತರಿ ವೈರಸ್‌ಗಳ ವಿರುದ್ಧ ಹೋರಾಡಬಹುದು ಮತ್ತು ಸುರಕ್ಷಿತವಾಗಿರಬಹುದು ಎಂದು ಡಾ.ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

“ಡೆಲ್ಟಾ ಪ್ಲಸ್ ರೂಪಾಂತರಿಯು ಹೆಚ್ಚು ಸಾಂಕ್ರಾಮಿಕ, ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಮತ್ತು  ರೋಗನಿರೋಧಕ ಶಕ್ತಿಯನ್ನು ಮೀರಿ ಸೋಂಕಿತರನ್ನಾಗಿಸುತ್ತದೆ ಎಂದು ಸೂಚಿಸಲು ಹೆಚ್ಚಿನ ಡೇಟಾ ಇಲ್ಲ. ಆದರೆ ನಾವು ಕೊರೊಬಾ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿದರೆ ಮತ್ತು ಲಸಿಕೆ ತೆಗೆದುಕೊಂಡರೆ, ಯಾವುದೇ ರೂಪಾಂತರಿ ವೈರಸ್‌ಗಳಿಂದ ವಿರುದ್ಧ ಸುರಕ್ಷಿತವಾಗಿರುತ್ತೇವೆ” ಎಂದು ಡಾ ಗುಲೇರಿಯಾ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ವೈದ್ಯರ ದಿನದಂದು ಏಮ್ಸ್ ನಿರ್ದೇಶಕರ ರಂದೀಪ್ ಗುಲೇರಿಯಾ ನೆನಪಿಸಿಕೊಂಡಿದ್ದಾರೆ.

“ಕಳೆದ ಒಂದು ವರ್ಷದಿಂದ ವೈದ್ಯರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಕೆಲಸವನ್ನು ನಾವು ಪ್ರಶಂಸಿಸಬೇಕು. ಈ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರನ್ನು ಸಹ ನಾವು ನೆನಪಿಸಿಕೊಳ್ಳಬೇಕು. ಅವರನ್ನು ನೆನಪಿಸಿಕೊಳ್ಳುವಾಗ, ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಬೇಕು” ಎಂದಿದ್ದಾರೆ.

“ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಕಡಿಮೆ ಒತ್ತಡ ಉಂಟಾಗುವಂತೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು “ಎಂದು ಹೇಳಿದ್ದಾರೆ.

ಇದರ ಜೊತೆಗೆ ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿ, ಇದು ವೈದ್ಯಕೀಯ ಸಮುದಾಯಕ್ಕೆ ನಿರಾಶಾದಾಯಕವಾಗಿದೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ.

“ವೈದ್ಯರು ಮಾಡುತ್ತಿರುವ ಕೆಲಸವನ್ನು ನಾವು ಮೆಚ್ಚಬೇಕು ಮತ್ತು ಗೌರವಿಸಬೇಕು ಮತ್ತು ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಬೇಕು. ಇದು ವೈದ್ಯಕೀಯ ಸಮುದಾಯಕ್ಕೆ ಧೈರ್ಯಗೆಡಿಸುವ ಒಂದು ಕೃತ್ಯವಾಗಿದೆ” ಎಂದು ಏಮ್ಸ್ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು, ’ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...