Homeಮುಖಪುಟ10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

- Advertisement -
- Advertisement -

ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮುಂದಿನ 10 ವರ್ಷಗಳವರೆಗೂ ಚಳವಳಿ ನಡೆಸಲು ಸಿದ್ಧರಿದ್ದಾರೆ. ಆದರೆ ಈ ಕರಾಳ ಕಾಯ್ದೆಗಳನ್ನು ಜಾರಿಗೊಳಿಸಲು ಯಾವತ್ತೂ ಬಿಡುವುದಿಲ್ಲವೆಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ರೈತ ಸಂಘಟನೆಗಳು ಕೃಷಿ ಕಾಯ್ದೆಗಳ ವಿರುದ್ಧ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಮುನ್ನಾ ದಿನವಾದ ರವಿವಾರ ಹರ್ಯಾಣದ ಪಾಣಿಪತ್ ನಡೆದ ಕಿಸಾನ್ ಮಹಾ ಪಂಚಾಯತ್ ನಲ್ಲಿ ಮಾತನಾಡಿ ಅವರು, ‘‘ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಆರಂಭಗೊಂಡು 10 ತಿಂಗಳುಗಳು ಕಳೆದಿವೆ. ಒಂದು ವೇಳೆ ನಾವು ಈ ಕಾಯ್ದೆಗಳ ವಿರುದ್ಧ ಇನ್ನೂ 10 ವರ್ಷಗಳ ಕಾಲ ಪ್ರತಿಭಟನೆ ನಡೆಸಲೂ ಸಿದ್ಧರಿದ್ದೇವೆಂಬುದನ್ನು ಸರಕಾರವು ಕಿವಿಗೊಟ್ಟು ಕೇಳಬೇಕು ಎಂದರು. ಈ ಕಾಯ್ದೆಗಳನ್ನು ರದ್ದುಪಡಿಸುವ ತನಕವೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದರು.

ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದೆ ಇದ್ದಲ್ಲಿ ತಮ್ಮ ಚಳವಳಿಯನ್ನು ರೈತರು ಇನ್ನಷ್ಟು ತೀವ್ರಗೊಳಿಸಲಿದ್ದಾರೆಂದು ಅವರು ಹೇಳಿದರು.

ದಿಲ್ಲಿಯತ್ತ ಸಾಗಬೇಕಾದ ಅಗತ್ಯ ಬಂದರೂ ಬರಬಹುದಾದೆಂದು ಹೇಳಿದ ಟಿಕಾಯತ್ ಅದಕ್ಕಾಗಿ ಟ್ರಾಕ್ಟರ್ ಗಳನ್ನು ಸಜ್ಜಾಗಿರಿಸುವಂತೆ ಕರೆ ನೀಡಿದರು.‌ ಒಂದು ವೇಳೆ ಈಗಿನ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದು ಪಡಿಸದೆ ಇದ್ದಲ್ಲಿ ಭವಿಷ್ಯದಲ್ಲಿ ಅಧಿಕಾರಕ್ಕೇರುವ ಸರಕಾರಗಳಾದರೂ ಅದನ್ನು ಹಿಂಪಡೆಯಲೇಬೇಕಾಗುತ್ತದೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನು ಬಲಪಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಟಿಕಾಯತ್ ಅವರು ಯುವರೈತರನ್ನು ಆಗ್ರಹಿಸಿದರು.

ರೈತರ ಪ್ರತಿಭಟನೆಗೆ ಕಳಂಕ ಹಚ್ಚಲು ನಡೆಯುತ್ತಿರುವ ಅಭಿಯಾನವನ್ನು ಮಟ್ಟಹಾಕುವ ಅತಿ ದೊಡ್ಡ ಜವಾಬ್ದಾರಿ ಯುವ ರೈತರ ಹೆಗಲ ಮೇಲಿದೆಯೆಂದು ಅವರು ಹೇಳಿದರು. ಆರಂಭದಲ್ಲಿ ಕೇಂದ್ರ ಸರಕಾರವು ಈ ಪ್ರತಿಭಟನೆಯು ಕೇವಲ ಪಂಜಾಬ್ ಗಷ್ಟೇ ಸೀಮಿತವಾಗಿದೆಯೆಂದು ಬಿಂಬಿಸಲು ಯತ್ನಿಸಿತ್ತು. ಆನಂತರ ರೈತರನ್ನು ಬೇರೆ ಬೇರೆ ಹೆಸರುಗಳಿಂದ ಬ್ರಾಂಡ್ ಮಾಡಲಾಯಿತು. ಅಲ್ಲದೆ ಇದು ಶ್ರೀಮಂತರ ರೈತರ ಪ್ರತಿಭಟನೆ ಎಂದು ಬಿಂಬಿಸುವ ಯತ್ನವೂ ನಡೆದಿತ್ತು ಎಂದು ಟಿಕಾಯತ್ ಹೇಳಿದರು.

ಇಂದಿನ ಭಾರತ್ ಬಂದ್‌ ಎಲ್ಲಾ ರಾಜ್ಯಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಬಂದ್ ಯಶಸ್ವಿಯಾಗಿದೆ.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...