Homeಮುಖಪುಟ10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

- Advertisement -
- Advertisement -

ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮುಂದಿನ 10 ವರ್ಷಗಳವರೆಗೂ ಚಳವಳಿ ನಡೆಸಲು ಸಿದ್ಧರಿದ್ದಾರೆ. ಆದರೆ ಈ ಕರಾಳ ಕಾಯ್ದೆಗಳನ್ನು ಜಾರಿಗೊಳಿಸಲು ಯಾವತ್ತೂ ಬಿಡುವುದಿಲ್ಲವೆಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ರೈತ ಸಂಘಟನೆಗಳು ಕೃಷಿ ಕಾಯ್ದೆಗಳ ವಿರುದ್ಧ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಮುನ್ನಾ ದಿನವಾದ ರವಿವಾರ ಹರ್ಯಾಣದ ಪಾಣಿಪತ್ ನಡೆದ ಕಿಸಾನ್ ಮಹಾ ಪಂಚಾಯತ್ ನಲ್ಲಿ ಮಾತನಾಡಿ ಅವರು, ‘‘ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಆರಂಭಗೊಂಡು 10 ತಿಂಗಳುಗಳು ಕಳೆದಿವೆ. ಒಂದು ವೇಳೆ ನಾವು ಈ ಕಾಯ್ದೆಗಳ ವಿರುದ್ಧ ಇನ್ನೂ 10 ವರ್ಷಗಳ ಕಾಲ ಪ್ರತಿಭಟನೆ ನಡೆಸಲೂ ಸಿದ್ಧರಿದ್ದೇವೆಂಬುದನ್ನು ಸರಕಾರವು ಕಿವಿಗೊಟ್ಟು ಕೇಳಬೇಕು ಎಂದರು. ಈ ಕಾಯ್ದೆಗಳನ್ನು ರದ್ದುಪಡಿಸುವ ತನಕವೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದರು.

ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದೆ ಇದ್ದಲ್ಲಿ ತಮ್ಮ ಚಳವಳಿಯನ್ನು ರೈತರು ಇನ್ನಷ್ಟು ತೀವ್ರಗೊಳಿಸಲಿದ್ದಾರೆಂದು ಅವರು ಹೇಳಿದರು.

ದಿಲ್ಲಿಯತ್ತ ಸಾಗಬೇಕಾದ ಅಗತ್ಯ ಬಂದರೂ ಬರಬಹುದಾದೆಂದು ಹೇಳಿದ ಟಿಕಾಯತ್ ಅದಕ್ಕಾಗಿ ಟ್ರಾಕ್ಟರ್ ಗಳನ್ನು ಸಜ್ಜಾಗಿರಿಸುವಂತೆ ಕರೆ ನೀಡಿದರು.‌ ಒಂದು ವೇಳೆ ಈಗಿನ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದು ಪಡಿಸದೆ ಇದ್ದಲ್ಲಿ ಭವಿಷ್ಯದಲ್ಲಿ ಅಧಿಕಾರಕ್ಕೇರುವ ಸರಕಾರಗಳಾದರೂ ಅದನ್ನು ಹಿಂಪಡೆಯಲೇಬೇಕಾಗುತ್ತದೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನು ಬಲಪಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಟಿಕಾಯತ್ ಅವರು ಯುವರೈತರನ್ನು ಆಗ್ರಹಿಸಿದರು.

ರೈತರ ಪ್ರತಿಭಟನೆಗೆ ಕಳಂಕ ಹಚ್ಚಲು ನಡೆಯುತ್ತಿರುವ ಅಭಿಯಾನವನ್ನು ಮಟ್ಟಹಾಕುವ ಅತಿ ದೊಡ್ಡ ಜವಾಬ್ದಾರಿ ಯುವ ರೈತರ ಹೆಗಲ ಮೇಲಿದೆಯೆಂದು ಅವರು ಹೇಳಿದರು. ಆರಂಭದಲ್ಲಿ ಕೇಂದ್ರ ಸರಕಾರವು ಈ ಪ್ರತಿಭಟನೆಯು ಕೇವಲ ಪಂಜಾಬ್ ಗಷ್ಟೇ ಸೀಮಿತವಾಗಿದೆಯೆಂದು ಬಿಂಬಿಸಲು ಯತ್ನಿಸಿತ್ತು. ಆನಂತರ ರೈತರನ್ನು ಬೇರೆ ಬೇರೆ ಹೆಸರುಗಳಿಂದ ಬ್ರಾಂಡ್ ಮಾಡಲಾಯಿತು. ಅಲ್ಲದೆ ಇದು ಶ್ರೀಮಂತರ ರೈತರ ಪ್ರತಿಭಟನೆ ಎಂದು ಬಿಂಬಿಸುವ ಯತ್ನವೂ ನಡೆದಿತ್ತು ಎಂದು ಟಿಕಾಯತ್ ಹೇಳಿದರು.

ಇಂದಿನ ಭಾರತ್ ಬಂದ್‌ ಎಲ್ಲಾ ರಾಜ್ಯಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಬಂದ್ ಯಶಸ್ವಿಯಾಗಿದೆ.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...