Homeಕರ್ನಾಟಕಅಂಬೇಡ್ಕರ್‌ ಸಂವಿಧಾನ ರಚಿಸಿಲ್ಲ ವಿವಾದ: ಶಿಕ್ಷಣ ಸಚಿವರ ರಾಜಿನಾಮೆಗೆ ಎಸ್ಎಫ್ಐ(SFI) ಒತ್ತಾಯ.

ಅಂಬೇಡ್ಕರ್‌ ಸಂವಿಧಾನ ರಚಿಸಿಲ್ಲ ವಿವಾದ: ಶಿಕ್ಷಣ ಸಚಿವರ ರಾಜಿನಾಮೆಗೆ ಎಸ್ಎಫ್ಐ(SFI) ಒತ್ತಾಯ.

- Advertisement -
- Advertisement -

ನವೆಂಬರ್ 26 ರಂದು ಸಂವಿಧಾನ ದಿನದ ಅಭಿಯಾನದ ಅಂಗವಾಗಿ ಸಿಎಂಸಿಎ ಸಿದ್ದಪಡಿಸಿದ ಕೈಪಿಡಿಯಲ್ಲಿ ಅಂಬೇಂಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಇರುವುದು ರಾಜ್ಯದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಜನರು ಅದನ್ನು ವಿರೋಧಿಸಿದ್ದರಿಂದ ಶಿಕ್ಷಣ ಇಲಾಖೆ ಕೈಪಿಡಿಯನ್ನು ವಾಪಸ್ ಪಡೆದುಕೊಂಡಿದೆ. ಆದರೂ ಈ ಪ್ರಮಾದಕ್ಕಾಗಿ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕೆಂದು ಎಸ್ಎಫ್ಐ(SFI) ಒತ್ತಾಯಿಸಿದೆ.

ಕೈಪಿಡಿಯ ಪುಟ ಸಂಖ್ಯೆ 05 ರಲ್ಲಿ ಪ್ರಶ್ನೆ ಎರಡರಲ್ಲಿ ಸಂವಿಧಾನವನ್ನು ಯಾರು ಬರೆದರು? ಎಂಬ ಪ್ರಶ್ನೆಗೆ ಉತ್ತರ ಎನ್ನುವ ರೀತಿಯಲ್ಲಿ ” ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನದ ಪಿತಾಮಹ ಆಗಿರುತ್ತಾರೆ, ಜೊತೆಗೆ ಅವರೊಬ್ಬರೆ ಸಂವಿಧಾನ ಬರೆದಿಲ್ಲ” ಎಂದು ಉಲ್ಲೇಖಿಸಿದ್ದಾರೆ. ಇದು ವಿವಾದಾತ್ಮಕವಾಗಿದ್ದು ಸಿಎಂಸಿಎ ಸಂಸ್ಥೆಗೆ ಸಂವಿಧಾನ ರಚನೆಯ ಮಹತ್ವ ಹಾಗೂ ಸಂವಿಧಾನದ ಬಗ್ಗೆ ಗೌರವ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಕರಡು ರಚನಾ ಸಮಿತಿಯಲ್ಲಿದ್ದ ಏಳು ಜನರಲ್ಲಿ ಬಹುತೇಕರು ಅಂಬೇಡ್ಕರ್ ರವರಿಗೆ ಸಹಾಯ ಮಾಡಲಿಲ್ಲ. ಅವರೊಬ್ಬರ ಶ್ರಮದಿಂದಾಗಿ ಸಂವಿಧಾನ ರಚಿತವಾಗಿದೆ ಎಂದು ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ಟಿ.ಟಿ. ಕೃಷ್ಣಮಾಚಾರಿಯವರು ಉಲ್ಲೇಖಿಸಿರುವುದು ರಾಜ್ಯ ಸರಕಾರಕ್ಕೆ ನೆನಪಿಲ್ಲದಂತೆ ಕಾಣುತ್ತದೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಕಿಡಿ ಕಾರಿದ್ದಾರೆ.

ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ಬರೆದಿಲ್ಲ ಎಂದು ಕೈಪಿಡಿಯಲ್ಲಿ ಬರೆಯುವ ಅಗತ್ಯವಾದರೂ ಏನಿತ್ತು? ಈ ರೀತಿ ಪ್ರಸ್ತಾಪಿಸುವುದರ ಉದ್ದೇಶ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರವನ್ನು ಗೌಣವಾಗಿಸುವುದಲ್ಲದೆ ಮತ್ತೇನು ಅಲ್ಲ. ರಾಜ್ಯ ಸರ್ಕಾರವು ಶಿಕ್ಷಣದಲ್ಲಿ ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಹೊರಟಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಇಲಾಖೆಯವರ ನಾಟಕವನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ಯಾವುದೇ ಪ್ರಸ್ಥಾಪ ಸರಕಾರದ ಅಥವಾ ಶಿಕ್ಷಣ ಸಚಿವರ/ ಇಲಾಖೆಯ ಗಮನಕ್ಕೆ ಇರದೆ ಅಂತಿಮವಾಗುವುದಿಲ್ಲ. ಸುರೇಶ್ ಕುಮಾರ್ ಹಾಗೂ ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಎಸ್‌ಎಫ್‌ಐ ಅಧ್ಯಕ್ಷ ಅಂಬರೀಶ್‌ರವರು ಆರೋಪಿಸಿದ್ದಾರೆ.

ಈ ವಿವಾದಕ್ಕೆ ಸುರೇಶ್ ಕುಮಾರ ಅವರೇ ನೇರ ಹೊಣೆಯಾಗಿರುತ್ತಾರೆ. ವಿವಾದಾತ್ಮಕ ಹೇಳಿಕೆಯನ್ನು ಬರೆಯುವುದರ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಸಿಎಂಸಿಎ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಸಂಸ್ಥೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕಿದೆ ಮತ್ತು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಎಸ್ಎಫ್ಐ (SFI) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದ್ದು, ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...