Homeಕರ್ನಾಟಕಅಂಬೇಡ್ಕರ್‌ ಸಂವಿಧಾನ ರಚಿಸಿಲ್ಲ ವಿವಾದ: ಶಿಕ್ಷಣ ಸಚಿವರ ರಾಜಿನಾಮೆಗೆ ಎಸ್ಎಫ್ಐ(SFI) ಒತ್ತಾಯ.

ಅಂಬೇಡ್ಕರ್‌ ಸಂವಿಧಾನ ರಚಿಸಿಲ್ಲ ವಿವಾದ: ಶಿಕ್ಷಣ ಸಚಿವರ ರಾಜಿನಾಮೆಗೆ ಎಸ್ಎಫ್ಐ(SFI) ಒತ್ತಾಯ.

- Advertisement -
- Advertisement -

ನವೆಂಬರ್ 26 ರಂದು ಸಂವಿಧಾನ ದಿನದ ಅಭಿಯಾನದ ಅಂಗವಾಗಿ ಸಿಎಂಸಿಎ ಸಿದ್ದಪಡಿಸಿದ ಕೈಪಿಡಿಯಲ್ಲಿ ಅಂಬೇಂಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಇರುವುದು ರಾಜ್ಯದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಜನರು ಅದನ್ನು ವಿರೋಧಿಸಿದ್ದರಿಂದ ಶಿಕ್ಷಣ ಇಲಾಖೆ ಕೈಪಿಡಿಯನ್ನು ವಾಪಸ್ ಪಡೆದುಕೊಂಡಿದೆ. ಆದರೂ ಈ ಪ್ರಮಾದಕ್ಕಾಗಿ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕೆಂದು ಎಸ್ಎಫ್ಐ(SFI) ಒತ್ತಾಯಿಸಿದೆ.

ಕೈಪಿಡಿಯ ಪುಟ ಸಂಖ್ಯೆ 05 ರಲ್ಲಿ ಪ್ರಶ್ನೆ ಎರಡರಲ್ಲಿ ಸಂವಿಧಾನವನ್ನು ಯಾರು ಬರೆದರು? ಎಂಬ ಪ್ರಶ್ನೆಗೆ ಉತ್ತರ ಎನ್ನುವ ರೀತಿಯಲ್ಲಿ ” ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನದ ಪಿತಾಮಹ ಆಗಿರುತ್ತಾರೆ, ಜೊತೆಗೆ ಅವರೊಬ್ಬರೆ ಸಂವಿಧಾನ ಬರೆದಿಲ್ಲ” ಎಂದು ಉಲ್ಲೇಖಿಸಿದ್ದಾರೆ. ಇದು ವಿವಾದಾತ್ಮಕವಾಗಿದ್ದು ಸಿಎಂಸಿಎ ಸಂಸ್ಥೆಗೆ ಸಂವಿಧಾನ ರಚನೆಯ ಮಹತ್ವ ಹಾಗೂ ಸಂವಿಧಾನದ ಬಗ್ಗೆ ಗೌರವ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಕರಡು ರಚನಾ ಸಮಿತಿಯಲ್ಲಿದ್ದ ಏಳು ಜನರಲ್ಲಿ ಬಹುತೇಕರು ಅಂಬೇಡ್ಕರ್ ರವರಿಗೆ ಸಹಾಯ ಮಾಡಲಿಲ್ಲ. ಅವರೊಬ್ಬರ ಶ್ರಮದಿಂದಾಗಿ ಸಂವಿಧಾನ ರಚಿತವಾಗಿದೆ ಎಂದು ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ಟಿ.ಟಿ. ಕೃಷ್ಣಮಾಚಾರಿಯವರು ಉಲ್ಲೇಖಿಸಿರುವುದು ರಾಜ್ಯ ಸರಕಾರಕ್ಕೆ ನೆನಪಿಲ್ಲದಂತೆ ಕಾಣುತ್ತದೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಕಿಡಿ ಕಾರಿದ್ದಾರೆ.

ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ಬರೆದಿಲ್ಲ ಎಂದು ಕೈಪಿಡಿಯಲ್ಲಿ ಬರೆಯುವ ಅಗತ್ಯವಾದರೂ ಏನಿತ್ತು? ಈ ರೀತಿ ಪ್ರಸ್ತಾಪಿಸುವುದರ ಉದ್ದೇಶ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರವನ್ನು ಗೌಣವಾಗಿಸುವುದಲ್ಲದೆ ಮತ್ತೇನು ಅಲ್ಲ. ರಾಜ್ಯ ಸರ್ಕಾರವು ಶಿಕ್ಷಣದಲ್ಲಿ ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಹೊರಟಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಇಲಾಖೆಯವರ ನಾಟಕವನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ಯಾವುದೇ ಪ್ರಸ್ಥಾಪ ಸರಕಾರದ ಅಥವಾ ಶಿಕ್ಷಣ ಸಚಿವರ/ ಇಲಾಖೆಯ ಗಮನಕ್ಕೆ ಇರದೆ ಅಂತಿಮವಾಗುವುದಿಲ್ಲ. ಸುರೇಶ್ ಕುಮಾರ್ ಹಾಗೂ ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಎಸ್‌ಎಫ್‌ಐ ಅಧ್ಯಕ್ಷ ಅಂಬರೀಶ್‌ರವರು ಆರೋಪಿಸಿದ್ದಾರೆ.

ಈ ವಿವಾದಕ್ಕೆ ಸುರೇಶ್ ಕುಮಾರ ಅವರೇ ನೇರ ಹೊಣೆಯಾಗಿರುತ್ತಾರೆ. ವಿವಾದಾತ್ಮಕ ಹೇಳಿಕೆಯನ್ನು ಬರೆಯುವುದರ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಸಿಎಂಸಿಎ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಸಂಸ್ಥೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕಿದೆ ಮತ್ತು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಎಸ್ಎಫ್ಐ (SFI) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದ್ದು, ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...