Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...