Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....