Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...