Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...