Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...