Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...