Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...