Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅಷ್ಟೇ ಅಲ್ಲ, ಮತ್ತಷ್ಟು ಸಿಎಂ ಆಕಾಂಕ್ಷಿಗಳಿದ್ದಾರೆ: ಎಂ.ಬಿ.ಪಾಟೀಲ್

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅಷ್ಟೇ ಅಲ್ಲ, ಮತ್ತಷ್ಟು ಸಿಎಂ ಆಕಾಂಕ್ಷಿಗಳಿದ್ದಾರೆ: ಎಂ.ಬಿ.ಪಾಟೀಲ್

- Advertisement -
- Advertisement -

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರ ಆಕಾಂಕ್ಷಿಗಳಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

“ನಾನು ಸೇರಿದಂತೆ ಸಿಎಂ ಸ್ಥಾನಕ್ಕೆ ಹಲವು ಸಮರ್ಥ ಸ್ಪರ್ಧಿಗಳಿದ್ದಾರೆ” ಎಂದು ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ಪಾಟೀಲ್ ಹೇಳಿದ್ದಾರೆ.

ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ (ಬ್ರಾಹ್ಮಣ) ಮತ್ತು ಕೃಷ್ಣ ಬೈರೇಗೌಡ (ಒಕ್ಕಲಿಗ) ಅವರನ್ನು ಸಂಭಾವ್ಯ ಸಿಎಂ ಅಭ್ಯರ್ಥಿಗಳೆಂದು ಅವರು ಹೆಸರಿಸಿದ್ದಾರೆ.

“ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯರಾದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಮ್ಮ ಪಕ್ಷದ ಉನ್ನತ ನಾಯಕರು. ನಾನು, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರು ನಂತರದ ಸಾಲಿನ ರಾಜ್ಯ ನಾಯಕರು” ಎಂದು ಪಾಟೀಲ್ ಹೇಳಿದ್ದಾರೆ.

“ಸಿಎಂ ಆಗುವ ಆಸೆಯನ್ನು ಯಾರು ಬೇಕಾದರೂ ವ್ಯಕ್ತಪಡಿಸಬಹುದು. ಆದರೆ ಒಬ್ಬರ ವೈಯಕ್ತಿಕ ಆಸಕ್ತಿ, ವಾಸ್ತವಕ್ಕೆ ದೂರವಿರಬಹುದು. ಅಂತಿಮವಾಗಿ ಶಾಸಕರ ಬೆಂಬಲ ಪಡೆಯಬೇಕು” ಎಂದು ಪಾಟೀಲ್ ಒತ್ತಿ ಹೇಳಿದ್ದಾರೆ.

“ಶಾಸಕರು ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತಾರೆ. ಇದನ್ನು ಅನುಸರಿಸಿ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ಕಾಂಗ್ರೆಸ್ಸಿನ ಪರಂಪರೆಯಾಗಿದೆ” ಎಂದಿದ್ದಾರೆ ಪಾಟೀಲ್.

“ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಸಿಎಂ ಆಗಬೇಕೆಂದು ಆಕಾಂಕ್ಷೆ ವ್ಯಕ್ತಪಡಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪಕ್ಷ ಯಾರನ್ನೂ ಪ್ರೊಜೆಕ್ಟ್ ಮಾಡಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಉನ್ನತ ನಾಯಕರು ಸ್ಪಷ್ಟಪಡಿಸಿದ್ದಾರೆ” ಎಂದಿದ್ದಾರೆ.

ಎಂ.ಬಿ.ಪಾಟೀಲ್ ಅವರು ಹೇಳಿರುವ ಮಾತುಗಳನ್ನೇ ಇತ್ತೀಚೆಗೆ ಸಿದ್ದರಾಮಯ್ಯನವರು ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದರು. ಆದರೆ ಎನ್‌ಡಿಟಿವಿ ಹೇಳಿಕೆಯನ್ನು ತಿರುಚಿ ಟೀಕೆಗೆ ಗುರಿಯಾಗಿತ್ತು. “ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳು ಸುದ್ದಿ ವರದಿ ಮಾಡಿತ್ತು.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿತ್ತು. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿತ್ತು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎಂದಿದ್ದರು ಸಿದ್ದರಾಮಯ್ಯ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎಂದು ಸ್ಪಷ್ಟಡಿಸಿದ್ದರು.

ತಿರುಚಿ ವರದಿ ಮಾಡಿದ್ದ ಎನ್‌ಡಿಟಿವಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಬಳಿಕ ಸುದ್ದಿಯನ್ನು ಎನ್‌ಡಿಟಿವಿ ತಿದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...