Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...