Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...