Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...