Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...