Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...