Homeಮುಖಪುಟ‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

‘ಪೆಯ್ಡ್‌ ನ್ಯೂಸ್ ಅಲ್ಲ’: ದೆಹಲಿ ಶಾಲೆಗಳ ವರದಿ ಬಗ್ಗೆ ಬಿಜೆಪಿ ಆರೋಪ ತಳ್ಳಿಹಾಕಿದ ನ್ಯೂಯಾರ್ಕ್ ಟೈಮ್ಸ್

- Advertisement -
- Advertisement -

ದೆಹಲಿಯ ಶಿಕ್ಷಣ ವ್ಯವಸ್ಥೆಯ ಕುರಿತು ಅಮೆರಿಕದ ಖ್ಯಾತ ಪತ್ರಿಕೆ ‘ನ್ಯೂಯಾರ್ಕ್ ಟೈಮ್ಸ್‌’ ಮುಖಪುಟದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರ ಚಿತ್ರ ಸಮೇತ ವರದಿಯೊಂದನ್ನು ಪ್ರಕಟಿಸಿತ್ತು. ಆದರೆ ಈ ವರದಿಯನ್ನು ಆಮ್‌ ಆದ್ಮಿ ಪಕ್ಷವೂ ಪತ್ರಿಕೆಗೆ ಹಣ ನೀಡಿ ಸುದ್ದಿ (ಪೆಯ್ಡ್‌ ನ್ಯೂಸ್ ನ್ಯೂಸ್) ಮಾಡಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿಯ ಈ ಆರೋಪವನ್ನು ಪತ್ರಿಕೆ ನಿರಾಕರಿಸಿದ್ದು, ‘ವರದಿಯನ್ನು ಯಾವುದೆ ಪಕ್ಷಪಾತವಿಲ್ಲದೆ ಗ್ರೌಂಡ್‌ ರಿಪೋರ್ಟ್ ಆಧಾರದಲ್ಲಿ ಮಾಡಲಾಗಿದೆ’ ಎಂದು ಹೇಳಿದೆ.

ನ್ಯೂಯಾರ್ಕ್ ಟೈಮ್ಸ್‌ನ ಸಂವಹನ ನಿರ್ದೇಶಕ ನಿಕೋಲ್ ಟೈಲರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳ ಕುರಿತ ನಮ್ಮ ವರದಿಯು ನಿಷ್ಪಕ್ಷಪಾತ, ಗೌಂಡ್‌ ರಿಪೋರ್ಟ್‌ ಅನ್ನು ಆಧರಿಸಿ ಬರೆಯಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌‌ ಹಲವು ವರ್ಷಗಳಿಂದ ವರದಿ ಮಾಡಲುತ್ತಲೆ ಬಂದಿದೆ. ನಮ್ಮ ಪತ್ರಿಕೋದ್ಯಮ ಯಾವಾಗಲೂ ಸ್ವತಂತ್ರವಾಗಿದ್ದು, ರಾಜಕೀಯ ಅಥವಾ ಜಾಹೀರಾತುದಾರರ ಪ್ರಭಾವದಿಂದ ಮುಕ್ತವಾಗಿದೆ” ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ದೆಹಲಿ ಶಿಕ್ಷಣ ಮಾದರಿಯ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯನ್ನು ಮೊದಲು ಆನ್‌ಲೈನ್‌ನಲ್ಲಿ ಆಗಸ್ಟ್ 16 ರಂದು ಮತ್ತು ಅದರ ಅಂತರ್‌‌ರಾಷ್ಟ್ರೀಯ ಆವೃತ್ತಿಯ ಮೊದಲ ಪುಟದಲ್ಲಿ ಆಗಸ್ಟ್ 18 ರಂದು ಪ್ರಕಟಿಸಿತ್ತು. ಶಿಕ್ಷಣದ ಸುಧಾರಣೆಗಾಗಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು ವರದಿಯು ಶ್ಲಾಘಿಸಿತ್ತು. ವಿಶೇಷವಾಗಿ 2015 ರಿಂದ ಸರ್ಕಾರಿ ಶಾಲೆಗಳನ್ನು ಅಮೂಲಾಗ್ರವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಉಲ್ಲೇಖಿಸಿತ್ತು.

ಈ ನಡುವೆ ಶುಕ್ರವಾರದಂದು ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ)ವು ಸಿಸೋಡಿಯಾ ಅವರ ಮನೆ ಮತ್ತು ಇತರ 20 ಸ್ಥಳಗಳನ್ನು ಶೋಧಿಸಿದೆ.

ದಿ ನ್ಯೂಯಾರ್ಕ್ ಟೈಮ್ಸ್ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ದೊಡ್ಡ ಪತ್ರಿಕೆಯೊಂದು ದೆಹಲಿಯ ಶಿಕ್ಷಣ ಕ್ರಾಂತಿಯ ಬಗ್ಗೆ ಬರೆದಿದ್ದು, ಸಿಸೋಡಿಯಾ ಅವರ ಫೋಟೋಗಳನ್ನು ಕೂಡಾ ಪ್ರಕಟಿಸಿದೆ” ಎಂದು ಕೇಜ್ರಿವಾಲ್ ಅವರು ಆನ್‌ಲೈನ್‌ ಭಾಷಣವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಆದಾಗ್ಯೂ, ಈ ಲೇಖನವು ಆಮ್‌ ಆದ್ಮಿ ಪಕ್ಷ ಹಣ ಪಾವತಿಸಿ ಬರೆಸಿದ ವರದಿ ಎಂದು ಬಿಜೆಪಿ ಹೇಳಿಕೊಂಡಿದೆ.

“ದೆಹಲಿಯಲ್ಲಿ ಅಸ್ತಿತ್ವದಲ್ಲಿಲ್ಲದ ಶಿಕ್ಷಣ ಮಾದರಿಯ ಒಂದೇ ರೀತಿಯ ಲೇಖನವನ್ನು ನ್ಯೂಯಾರ್ಕ್ ಟೈಮ್ಸ್ ಮತ್ತು ಖಲೀಜ್ ಟೈಮ್ಸ್ ಪ್ರಕಟಿಸಿದೆ. ಅದರ ಎಲ್ಲಾ ಪದಗಳೂ ಒಂದೇ ರೀತಿ ಇದ್ದು, ಒಂದೇ ವ್ಯಕ್ತಿ ಬರೆದಿದ್ದಾರೆ. ಒಂದೇ ರೀತಿಯ ಅದರಲ್ಲೂ ಒಂದು ಖಾಸಗಿ ಶಾಲೆಯ ಚಿತ್ರವನ್ನು ಬಳಸಲಾಗಿದೆ. ಇದು ಹೇಗೆ ಸಾಧ್ಯ” ಎಂದು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ಹಣ ನೀಡಿ ಪ್ರಚಾರ ಮಾಡುತ್ತಾರೆಯೆ ವಿನಃ ಬೇರೇನು ಅಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮುಖಂಡ ಪರ್ವೇಶ್ ವರ್ಮಾ ಅವರು ಎರಡೂ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನದ ಪ್ರತಿಗಳನ್ನು ತೋರಿಸಿದ್ದಾರೆ. “ಇದು ಎರಡೂ ಪತ್ರಿಕೆಗಳ ಫೋಟೋ. ಎರಡೂ ಪತ್ರಿಕೆಗಳಲ್ಲಿ ಒಬ್ಬರೇ ವರದಿಗಾರ, ಒಂದೇ ರೀತಿಯ ಲೇಖನ, ಪದಗಳೂ ಒಂದೇ ರೀತಿಯಿದೆ, ಒಂದೇ ರೀತಿಯ ಆರು ಚಿತ್ರಗಳು ಎರಡರಲ್ಲೂ ಇವೆ. ಈ ರೀತಿ ಎಂದಾದರೂ ಸಂಭವಿಸುತ್ತದೆಯೇ?” ಎಂದು ಪ್ರಶ್ನಿಸಿದ್ದರು.

ಆದರೆ ಬಿಜೆಪಿಯ ಈ ಆರೋಪಕ್ಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರತಿಕ್ರಿಯಿಸಿದೆ. ಇತರ ಪತ್ರಿಕೆಗಳು ವಾಡಿಕೆಯಂತೆ ನಮ್ಮ ಬರಹಗಳನ್ನು ಮರುಪ್ರಕಟನೆ ಮಾಡುವ ಪರವಾನಿಗೆಯನ್ನು ನ್ಯೂಯಾರ್ಕ್ ಟೈಮ್ಸ್ ನೀಡಿದೆ ಎಂದು ನಿಕೋಲ್ ಟೈಲರ್ ಹೇಳಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ ಮೌನ ಮುರಿಯಬೇಕಿದೆ’ – ನ್ಯೂಯಾರ್ಕ್ ಟೈಮ್ಸ್

ಖಲೀಜ್ ಟೈಮ್ಸ್ ಲೇಖನವು ಸಿಂಡಿಕೇಟೆಡ್ ಆಗಿದ್ದು ಅದರ ಬರಹವು ನ್ಯೂಯಾರ್ಕ್ ಟೈಮ್ಸ್‌ಗೆ ಸಲ್ಲುತ್ತದೆ ಎಂದು ಆಮ್ ಆದ್ಮಿ ಪಕ್ಷವೂ ಸ್ಪಷ್ಟಪಡಿಸಿದೆ. ಸುದ್ದಿ ಸಿಂಡಿಕೇಶನ್ ಸೇವೆಗಳ ಅಡಿಯಲ್ಲಿ ಪತ್ರಿಕೆಗಳು ತಮ್ಮ ಚಂದಾದಾರಿಕೆಯ ಮೂಲಕ ಮತ್ತೊಂದು ಪತ್ರಿಕೆಯ ಬರಹಗಳನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.

ಲೇಖನವನ್ನು ಹಣ ನೀಡಿ ಬರೆಸಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ, “ಬಿಜೆಪಿ ನಗೆಪಾಟಲಿಗೀಡಾಗಿದೆ. ಪತ್ರಿಕೆಯಲ್ಲಿ ಯಾವುದೇ ಬಿಜೆಪಿ ನಾಯಕರ ಸುದ್ದಿಯನ್ನು ಮುದ್ರಿಸಲಾಗಿಲ್ಲ. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ ಎಂದು ಕರೆದುಕೊಳ್ಳುತ್ತಿದ್ದು, ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. ಯಾರಾದರೂ ಪತ್ರಿಕೆಯನ್ನು ಖರೀದಿಸಲು ಸಾಧ್ಯವಾದರೆ ಅವರು ಪ್ರತಿದಿನ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ಕಾಣಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಲೇಖನ ಪ್ರಕಟಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ. “ನಾನು ಅವರಿಗೆ ಸವಾಲು ಹಾಕುತ್ತೇನೆ, ನಿಮ್ಮ ಬಳಿ ಇರುವ ಹಣ, ನಿಮ್ಮ ಬಳಿ ಇರುವ ಅಧಿಕಾರವನ್ನು ಬಳಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಅವರು “ಸುಳ್ಳು ಆರೋಪಗಳನ್ನು ಮಾಡುವ ಮೊದಲು ಸ್ವಲ್ಪ ಹೋಂವರ್ಕ್‌ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ ಹಲವು ಪತ್ರಕರ್ತರು ಕೂಡ ಟ್ವಿಟ್ಟರ್ ಮೂಲಕ ಬಿಜೆಪಿಗೆ ಸಿಂಡಿಕೇಶನ್ ಎಂದರೆ ಏನು ಎಂದು ತಿಳಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...