Homeಮುಖಪುಟಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳ ಸರ್ವಾನುಮತದ ನಿರ್ಧಾರ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದೆ.

ಸೋಮವಾರ ಸುಪ್ರೀಮ್‌ ಕೋರ್ಟ್‌ನಲ್ಲಿ ರೈತ ಪ್ರತಿಭಟನೆಗೆ ಸಂಬಂಧಿಸಿದ ವಿಚಾರಣೆಯ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮೋರ್ಚಾ, “ವಿಚಾರಣೆಯ ವೇಳೆ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಮತ್ತು ಹಿತಕರವಾದ ಮಾತುಗಳನ್ನು ಆಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್‌ಗೆ ಗೌರವವನ್ನು ವ್ಯಕ್ತಪಡಿಸುತ್ತೇವೆ” ಎಂದಿದೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

“ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಿವೆ.

ನ್ಯಾಯಾಲಯದಲ್ಲಿ ಸರ್ಕಾರದ ತನ್ನ ಧೋರಣೆ ಮತ್ತು ನಡೆಗಳಿಂದ, ಸಮಿತಿಯ ಮುಂದೂ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಸಂಯುಕ್ತ ಮೋರ್ಚಾದ ದರ್ಶನ್‌ ಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಸುಪ್ರೀಂ ಕೋರ್ಟ್‌, ಮೊಂಡು ಹಿಡಿದಿರುವ ಸರ್ಕಾರದ ಧೋರಣೆಯನ್ನು ನೋಡಿ, ಸಮಿತಿಯೊಂದನ್ನು ನೇಮಿಸುವ ಸಾಧ್ಯತೆ ಇದೆ. ಆದರೆ ನಮ್ಮ ವಕೀಲರು ನ್ಯಾಯಾಲಯದ ಎದುರು, ಹೋರಾಟದಲ್ಲಿ ಪಾಲ್ಗೊಂಡಿರುವ ಯಾವುದೇ ಸಂಘಟನೆಗಳೊಂದಿಗೆ ಸಮಾಲೋಚಿಸದೇ ನೇಮಿಸುವ ಸಮಿತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ವಿಚಾರಣೆಯ ಬಳಿಕ ನಮ್ಮ ವಕೀಲರೊಂದಿಗೆ ದೀರ್ಘಕಾಲ ಸಮಾಲೋಚಿಸಿದ ಬಳಿಕ ಸಮಿತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು, ನಾವು ಯಾವುದೇ ಸಮಿತಿಯ ಎದುರು ಹೋಗದಿರಲು ಸರ್ವಾನುಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ ನಮ್ಮ ವಕೀಲರು ಹಾಗೂ ಇತರೆ ವಕೀಲರ ಮೂಲಕ- ಹರೀಶ್‌ ಸಾಳ್ವೆ- ಮಂಗಳವಾರ ವಿಚಾರಣೆ ನಡೆಸಲು ಮತ್ತು ಸುಪ್ರೀಂ ಕೋರ್ಟ್‌ ಸಲಹೆಗೆ ಸಮ್ಮತಿ ಪಡೆಯಲು ಮನವಿ ಮಾಡಿತ್ತು. ಮಂಗಳವಾರಕ್ಕೆ ಈ ಕುರಿತು ತೀರ್ಪು ನೀಡಲು ಎಲ್ಲ ಸಿದ್ಧತೆಗಳು ನಡೆದಿದ್ದು, ಈ ಬೆಳವಣಿಗೆಗಳಿಂದ ನಾವು, ನಮ್ಮ ವಕೀಲರು ಮತ್ತು ರೈತ ಸಮೂಹ ತೀವ್ರವಾಗಿ ನಿರಾಶರಾಗಿದ್ದೇವೆ. ಹಾಗಾಗಿ ಜಗತ್ತಿಗೆ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವುದಕ್ಕಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ಆಗಿರುವುದರಿಂದ ಮತ್ತು ಸಾರ್ವಜನಿಕ ಆಸಕ್ತಿ ಇರುವುದರಿಂದ, ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದೆ.

ಮೋರ್ಚಾದ ಎಸ್‌ ಬಲ್ವೀರ್‌ ಎಸ್‌ ರಾಜೇವಾಲ್‌, ಡಾ. ದರ್ಶನ್‌ಪಾಲ್‌, ಎಸ್‌ ಪ್ರೇಮ್‌ ಎಸ್‌ ಭಂಗು, ಎಸ್‌ ರಾಜೀಂದರ್‌ ಸಿಂಘ್‌ದೀಪ್‌ ಸಿಂಘ್‌ ವಾಲ ಮತ್ತು ಎಸ್‌ ಜಗ್‌ಮೋಹನ್‌ ಸಿಂಘ್‌ ಅವರು, ನ್ಯಾಯವಾದಿಗಳಾದ ದುಶ್ಯಂತ ದಾವೆ, ಎಸ್‌ ಪ್ರಶಾಂತ್‌ ಭೂಷಣ್‌, ಎಸ್‌ ಕಾಲಿನ್‌ ಗೋನ್ಸಾವ್ಲಿಸ್‌ ಮತ್ತು ಎಚ್‌ ಎಸ್‌ ಫೂಲ್ಕಾ ಅವರೊಂದಿಗೆ ನಡೆಸಿದ ಸಮಾಲೋಚನೆಯ ಬಳಿಕ ಈ ಹೇಳಿಕೆ ನೀಡಿರುವುದಾಗಿ ಮೋರ್ಚಾ ಪ್ರಕಟಣೆ ತಿಳಿಸಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...