Homeಮುಖಪುಟಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳ ಸರ್ವಾನುಮತದ ನಿರ್ಧಾರ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದೆ.

ಸೋಮವಾರ ಸುಪ್ರೀಮ್‌ ಕೋರ್ಟ್‌ನಲ್ಲಿ ರೈತ ಪ್ರತಿಭಟನೆಗೆ ಸಂಬಂಧಿಸಿದ ವಿಚಾರಣೆಯ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮೋರ್ಚಾ, “ವಿಚಾರಣೆಯ ವೇಳೆ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಮತ್ತು ಹಿತಕರವಾದ ಮಾತುಗಳನ್ನು ಆಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್‌ಗೆ ಗೌರವವನ್ನು ವ್ಯಕ್ತಪಡಿಸುತ್ತೇವೆ” ಎಂದಿದೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

“ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಿವೆ.

ನ್ಯಾಯಾಲಯದಲ್ಲಿ ಸರ್ಕಾರದ ತನ್ನ ಧೋರಣೆ ಮತ್ತು ನಡೆಗಳಿಂದ, ಸಮಿತಿಯ ಮುಂದೂ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಸಂಯುಕ್ತ ಮೋರ್ಚಾದ ದರ್ಶನ್‌ ಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಸುಪ್ರೀಂ ಕೋರ್ಟ್‌, ಮೊಂಡು ಹಿಡಿದಿರುವ ಸರ್ಕಾರದ ಧೋರಣೆಯನ್ನು ನೋಡಿ, ಸಮಿತಿಯೊಂದನ್ನು ನೇಮಿಸುವ ಸಾಧ್ಯತೆ ಇದೆ. ಆದರೆ ನಮ್ಮ ವಕೀಲರು ನ್ಯಾಯಾಲಯದ ಎದುರು, ಹೋರಾಟದಲ್ಲಿ ಪಾಲ್ಗೊಂಡಿರುವ ಯಾವುದೇ ಸಂಘಟನೆಗಳೊಂದಿಗೆ ಸಮಾಲೋಚಿಸದೇ ನೇಮಿಸುವ ಸಮಿತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ವಿಚಾರಣೆಯ ಬಳಿಕ ನಮ್ಮ ವಕೀಲರೊಂದಿಗೆ ದೀರ್ಘಕಾಲ ಸಮಾಲೋಚಿಸಿದ ಬಳಿಕ ಸಮಿತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು, ನಾವು ಯಾವುದೇ ಸಮಿತಿಯ ಎದುರು ಹೋಗದಿರಲು ಸರ್ವಾನುಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ ನಮ್ಮ ವಕೀಲರು ಹಾಗೂ ಇತರೆ ವಕೀಲರ ಮೂಲಕ- ಹರೀಶ್‌ ಸಾಳ್ವೆ- ಮಂಗಳವಾರ ವಿಚಾರಣೆ ನಡೆಸಲು ಮತ್ತು ಸುಪ್ರೀಂ ಕೋರ್ಟ್‌ ಸಲಹೆಗೆ ಸಮ್ಮತಿ ಪಡೆಯಲು ಮನವಿ ಮಾಡಿತ್ತು. ಮಂಗಳವಾರಕ್ಕೆ ಈ ಕುರಿತು ತೀರ್ಪು ನೀಡಲು ಎಲ್ಲ ಸಿದ್ಧತೆಗಳು ನಡೆದಿದ್ದು, ಈ ಬೆಳವಣಿಗೆಗಳಿಂದ ನಾವು, ನಮ್ಮ ವಕೀಲರು ಮತ್ತು ರೈತ ಸಮೂಹ ತೀವ್ರವಾಗಿ ನಿರಾಶರಾಗಿದ್ದೇವೆ. ಹಾಗಾಗಿ ಜಗತ್ತಿಗೆ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವುದಕ್ಕಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ಆಗಿರುವುದರಿಂದ ಮತ್ತು ಸಾರ್ವಜನಿಕ ಆಸಕ್ತಿ ಇರುವುದರಿಂದ, ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದೆ.

ಮೋರ್ಚಾದ ಎಸ್‌ ಬಲ್ವೀರ್‌ ಎಸ್‌ ರಾಜೇವಾಲ್‌, ಡಾ. ದರ್ಶನ್‌ಪಾಲ್‌, ಎಸ್‌ ಪ್ರೇಮ್‌ ಎಸ್‌ ಭಂಗು, ಎಸ್‌ ರಾಜೀಂದರ್‌ ಸಿಂಘ್‌ದೀಪ್‌ ಸಿಂಘ್‌ ವಾಲ ಮತ್ತು ಎಸ್‌ ಜಗ್‌ಮೋಹನ್‌ ಸಿಂಘ್‌ ಅವರು, ನ್ಯಾಯವಾದಿಗಳಾದ ದುಶ್ಯಂತ ದಾವೆ, ಎಸ್‌ ಪ್ರಶಾಂತ್‌ ಭೂಷಣ್‌, ಎಸ್‌ ಕಾಲಿನ್‌ ಗೋನ್ಸಾವ್ಲಿಸ್‌ ಮತ್ತು ಎಚ್‌ ಎಸ್‌ ಫೂಲ್ಕಾ ಅವರೊಂದಿಗೆ ನಡೆಸಿದ ಸಮಾಲೋಚನೆಯ ಬಳಿಕ ಈ ಹೇಳಿಕೆ ನೀಡಿರುವುದಾಗಿ ಮೋರ್ಚಾ ಪ್ರಕಟಣೆ ತಿಳಿಸಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...