Homeಮುಖಪುಟಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳ ಸರ್ವಾನುಮತದ ನಿರ್ಧಾರ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದೆ.

ಸೋಮವಾರ ಸುಪ್ರೀಮ್‌ ಕೋರ್ಟ್‌ನಲ್ಲಿ ರೈತ ಪ್ರತಿಭಟನೆಗೆ ಸಂಬಂಧಿಸಿದ ವಿಚಾರಣೆಯ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮೋರ್ಚಾ, “ವಿಚಾರಣೆಯ ವೇಳೆ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಮತ್ತು ಹಿತಕರವಾದ ಮಾತುಗಳನ್ನು ಆಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್‌ಗೆ ಗೌರವವನ್ನು ವ್ಯಕ್ತಪಡಿಸುತ್ತೇವೆ” ಎಂದಿದೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

“ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಿವೆ.

ನ್ಯಾಯಾಲಯದಲ್ಲಿ ಸರ್ಕಾರದ ತನ್ನ ಧೋರಣೆ ಮತ್ತು ನಡೆಗಳಿಂದ, ಸಮಿತಿಯ ಮುಂದೂ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಸಂಯುಕ್ತ ಮೋರ್ಚಾದ ದರ್ಶನ್‌ ಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಸುಪ್ರೀಂ ಕೋರ್ಟ್‌, ಮೊಂಡು ಹಿಡಿದಿರುವ ಸರ್ಕಾರದ ಧೋರಣೆಯನ್ನು ನೋಡಿ, ಸಮಿತಿಯೊಂದನ್ನು ನೇಮಿಸುವ ಸಾಧ್ಯತೆ ಇದೆ. ಆದರೆ ನಮ್ಮ ವಕೀಲರು ನ್ಯಾಯಾಲಯದ ಎದುರು, ಹೋರಾಟದಲ್ಲಿ ಪಾಲ್ಗೊಂಡಿರುವ ಯಾವುದೇ ಸಂಘಟನೆಗಳೊಂದಿಗೆ ಸಮಾಲೋಚಿಸದೇ ನೇಮಿಸುವ ಸಮಿತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ವಿಚಾರಣೆಯ ಬಳಿಕ ನಮ್ಮ ವಕೀಲರೊಂದಿಗೆ ದೀರ್ಘಕಾಲ ಸಮಾಲೋಚಿಸಿದ ಬಳಿಕ ಸಮಿತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು, ನಾವು ಯಾವುದೇ ಸಮಿತಿಯ ಎದುರು ಹೋಗದಿರಲು ಸರ್ವಾನುಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ ನಮ್ಮ ವಕೀಲರು ಹಾಗೂ ಇತರೆ ವಕೀಲರ ಮೂಲಕ- ಹರೀಶ್‌ ಸಾಳ್ವೆ- ಮಂಗಳವಾರ ವಿಚಾರಣೆ ನಡೆಸಲು ಮತ್ತು ಸುಪ್ರೀಂ ಕೋರ್ಟ್‌ ಸಲಹೆಗೆ ಸಮ್ಮತಿ ಪಡೆಯಲು ಮನವಿ ಮಾಡಿತ್ತು. ಮಂಗಳವಾರಕ್ಕೆ ಈ ಕುರಿತು ತೀರ್ಪು ನೀಡಲು ಎಲ್ಲ ಸಿದ್ಧತೆಗಳು ನಡೆದಿದ್ದು, ಈ ಬೆಳವಣಿಗೆಗಳಿಂದ ನಾವು, ನಮ್ಮ ವಕೀಲರು ಮತ್ತು ರೈತ ಸಮೂಹ ತೀವ್ರವಾಗಿ ನಿರಾಶರಾಗಿದ್ದೇವೆ. ಹಾಗಾಗಿ ಜಗತ್ತಿಗೆ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವುದಕ್ಕಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ಆಗಿರುವುದರಿಂದ ಮತ್ತು ಸಾರ್ವಜನಿಕ ಆಸಕ್ತಿ ಇರುವುದರಿಂದ, ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದೆ.

ಮೋರ್ಚಾದ ಎಸ್‌ ಬಲ್ವೀರ್‌ ಎಸ್‌ ರಾಜೇವಾಲ್‌, ಡಾ. ದರ್ಶನ್‌ಪಾಲ್‌, ಎಸ್‌ ಪ್ರೇಮ್‌ ಎಸ್‌ ಭಂಗು, ಎಸ್‌ ರಾಜೀಂದರ್‌ ಸಿಂಘ್‌ದೀಪ್‌ ಸಿಂಘ್‌ ವಾಲ ಮತ್ತು ಎಸ್‌ ಜಗ್‌ಮೋಹನ್‌ ಸಿಂಘ್‌ ಅವರು, ನ್ಯಾಯವಾದಿಗಳಾದ ದುಶ್ಯಂತ ದಾವೆ, ಎಸ್‌ ಪ್ರಶಾಂತ್‌ ಭೂಷಣ್‌, ಎಸ್‌ ಕಾಲಿನ್‌ ಗೋನ್ಸಾವ್ಲಿಸ್‌ ಮತ್ತು ಎಚ್‌ ಎಸ್‌ ಫೂಲ್ಕಾ ಅವರೊಂದಿಗೆ ನಡೆಸಿದ ಸಮಾಲೋಚನೆಯ ಬಳಿಕ ಈ ಹೇಳಿಕೆ ನೀಡಿರುವುದಾಗಿ ಮೋರ್ಚಾ ಪ್ರಕಟಣೆ ತಿಳಿಸಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...