Homeಮುಖಪುಟಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳ ಸರ್ವಾನುಮತದ ನಿರ್ಧಾರ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದೆ.

ಸೋಮವಾರ ಸುಪ್ರೀಮ್‌ ಕೋರ್ಟ್‌ನಲ್ಲಿ ರೈತ ಪ್ರತಿಭಟನೆಗೆ ಸಂಬಂಧಿಸಿದ ವಿಚಾರಣೆಯ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮೋರ್ಚಾ, “ವಿಚಾರಣೆಯ ವೇಳೆ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಮತ್ತು ಹಿತಕರವಾದ ಮಾತುಗಳನ್ನು ಆಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್‌ಗೆ ಗೌರವವನ್ನು ವ್ಯಕ್ತಪಡಿಸುತ್ತೇವೆ” ಎಂದಿದೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

“ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಿವೆ.

ನ್ಯಾಯಾಲಯದಲ್ಲಿ ಸರ್ಕಾರದ ತನ್ನ ಧೋರಣೆ ಮತ್ತು ನಡೆಗಳಿಂದ, ಸಮಿತಿಯ ಮುಂದೂ ಕಾಯ್ದೆಗಳನ್ನು ಹಿಂಪಡೆಯಲು ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಸಂಯುಕ್ತ ಮೋರ್ಚಾದ ದರ್ಶನ್‌ ಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಸುಪ್ರೀಂ ಕೋರ್ಟ್‌, ಮೊಂಡು ಹಿಡಿದಿರುವ ಸರ್ಕಾರದ ಧೋರಣೆಯನ್ನು ನೋಡಿ, ಸಮಿತಿಯೊಂದನ್ನು ನೇಮಿಸುವ ಸಾಧ್ಯತೆ ಇದೆ. ಆದರೆ ನಮ್ಮ ವಕೀಲರು ನ್ಯಾಯಾಲಯದ ಎದುರು, ಹೋರಾಟದಲ್ಲಿ ಪಾಲ್ಗೊಂಡಿರುವ ಯಾವುದೇ ಸಂಘಟನೆಗಳೊಂದಿಗೆ ಸಮಾಲೋಚಿಸದೇ ನೇಮಿಸುವ ಸಮಿತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ವಿಚಾರಣೆಯ ಬಳಿಕ ನಮ್ಮ ವಕೀಲರೊಂದಿಗೆ ದೀರ್ಘಕಾಲ ಸಮಾಲೋಚಿಸಿದ ಬಳಿಕ ಸಮಿತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದು, ನಾವು ಯಾವುದೇ ಸಮಿತಿಯ ಎದುರು ಹೋಗದಿರಲು ಸರ್ವಾನುಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ ನಮ್ಮ ವಕೀಲರು ಹಾಗೂ ಇತರೆ ವಕೀಲರ ಮೂಲಕ- ಹರೀಶ್‌ ಸಾಳ್ವೆ- ಮಂಗಳವಾರ ವಿಚಾರಣೆ ನಡೆಸಲು ಮತ್ತು ಸುಪ್ರೀಂ ಕೋರ್ಟ್‌ ಸಲಹೆಗೆ ಸಮ್ಮತಿ ಪಡೆಯಲು ಮನವಿ ಮಾಡಿತ್ತು. ಮಂಗಳವಾರಕ್ಕೆ ಈ ಕುರಿತು ತೀರ್ಪು ನೀಡಲು ಎಲ್ಲ ಸಿದ್ಧತೆಗಳು ನಡೆದಿದ್ದು, ಈ ಬೆಳವಣಿಗೆಗಳಿಂದ ನಾವು, ನಮ್ಮ ವಕೀಲರು ಮತ್ತು ರೈತ ಸಮೂಹ ತೀವ್ರವಾಗಿ ನಿರಾಶರಾಗಿದ್ದೇವೆ. ಹಾಗಾಗಿ ಜಗತ್ತಿಗೆ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವುದಕ್ಕಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ರೈತರು ಮತ್ತು ಅವರ ಪ್ರತಿನಿಧಿಗಳಾಗಿ ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ, ಅದರ ಸಲಹೆಯನ್ನು ಒಪ್ಪಿಕೊಳ್ಳದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಹೋರಾಟವು ದೇಶದಲ್ಲಿರುವ ಲಕ್ಷಾಂತರ ರೈತರ ಒಳಿತಿಗಾಗಿ ಆಗಿರುವುದರಿಂದ ಮತ್ತು ಸಾರ್ವಜನಿಕ ಆಸಕ್ತಿ ಇರುವುದರಿಂದ, ಸರ್ಕಾರವು ಈ ಪ್ರತಿಭಟನೆಯನ್ನು ಪಂಜಾಬ್‌ ರೈತರಿಗಷ್ಟೇ ಸೀಮಿತಗೊಳಿಸುತ್ತಿದ್ದು, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿದ ರೈತರು ದೆಹಲಿ ಗಡಿಯಲ್ಲಿ ಸೇರಿದ್ದಾರೆ. ಅಷ್ಟೇ ಅಲ್ಲ ವಿವಿಧ ರಾಜ್ಯಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದೆ.

ಮೋರ್ಚಾದ ಎಸ್‌ ಬಲ್ವೀರ್‌ ಎಸ್‌ ರಾಜೇವಾಲ್‌, ಡಾ. ದರ್ಶನ್‌ಪಾಲ್‌, ಎಸ್‌ ಪ್ರೇಮ್‌ ಎಸ್‌ ಭಂಗು, ಎಸ್‌ ರಾಜೀಂದರ್‌ ಸಿಂಘ್‌ದೀಪ್‌ ಸಿಂಘ್‌ ವಾಲ ಮತ್ತು ಎಸ್‌ ಜಗ್‌ಮೋಹನ್‌ ಸಿಂಘ್‌ ಅವರು, ನ್ಯಾಯವಾದಿಗಳಾದ ದುಶ್ಯಂತ ದಾವೆ, ಎಸ್‌ ಪ್ರಶಾಂತ್‌ ಭೂಷಣ್‌, ಎಸ್‌ ಕಾಲಿನ್‌ ಗೋನ್ಸಾವ್ಲಿಸ್‌ ಮತ್ತು ಎಚ್‌ ಎಸ್‌ ಫೂಲ್ಕಾ ಅವರೊಂದಿಗೆ ನಡೆಸಿದ ಸಮಾಲೋಚನೆಯ ಬಳಿಕ ಈ ಹೇಳಿಕೆ ನೀಡಿರುವುದಾಗಿ ಮೋರ್ಚಾ ಪ್ರಕಟಣೆ ತಿಳಿಸಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...