Homeಮುಖಪುಟನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

- Advertisement -
- Advertisement -

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಸುದೀರ್ಘ ಸೆರೆವಾಸ ಅನುಭವಿಸುತ್ತಿರುವ ಏಳು ಮಂದಿ ಮಾನವ ಹಕ್ಕುಗಳ ಹೋರಾಟಗಾರರು ಶುಕ್ರವಾರದಿಂದ (ಅ.18) ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಪ್ರಕರಣದ ಕಳೆದ ಮೂರು ವಿಚಾರಣೆಗಳಿಗೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಭದ್ರತೆಯ ನೆಪವೊಡ್ಡಿ ತಲೋಜಾ ಕೇಂದ್ರ ಕಾರಾಗೃಹದಿಂದ ದಕ್ಷಿಣ ಮುಂಬೈನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಕರೆದೊಯ್ಯುವಲ್ಲಿ ನವ ಮುಂಬೈ ಪೊಲೀಸರು ವಿಫಲರಾಗಿದ್ದಾರೆ ಎಂದು ವರದಿಯಾಗಿದ್ದು, ಇದರ ವಿರುದ್ದ ಆರೋಪಿಗಳು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಒಟ್ಟು 16 ಜನರು ಬಂಧಿತರಾಗಿದ್ದರು. ಈ ಪೈಕಿ ಒಬ್ಬರು ಸಾವನ್ನಪಿದ್ದು, 7 ಮಂದಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಉಳಿದ ಏಳು ಮಂದಿ ಪುರುಷರು ಮತ್ತು ಒಬ್ಬರು ಮಹಿಳೆ ಸೇರಿ 8 ಮಂದಿ ಇನ್ನೂ ಜೈಲಿನಲ್ಲಿದ್ದಾರೆ.

ಮಾನವ ಹಕ್ಕುಗಳ ವಕೀಲ ಸುರೇಂದ್ರ ಗ್ಯಾಡ್ಲಿಂಗ್, ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು, ಕೈದಿಗಳ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್, ಸಾಂಸ್ಕೃತಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್, ವಿದ್ರೋಹಿ ನಿಯತಕಾಲಿಕದ ಸಂಪಾದಕ ಮತ್ತು ಲೇಖಕ ಸುಧೀರ್ ಧಾವಳೆ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ ಮಹೇಶ್ ರಾವುತ್ ಪ್ರಸ್ತುತ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತರಾಗಿ ಬೈಕುಲ್ಲಾ ಮಹಿಳಾ ಜೈಲಿನಲ್ಲಿರುವ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ಎಲ್ಲಾ 16 ಆರೋಪಿಗಳನ್ನು “ನಗರ ನಕ್ಸಲರು” ಎಂದು ಆರೋಪಿಸಲಾಗಿದೆ. ಅವರ ವಿರುದ್ದ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ಕಠಿಣ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಹಬ್ಬಗಳು, ಚುನಾವಣೆಗಳು ಮತ್ತು ವಿಐಪಿ ಭೇಟಿಗಳ ಕಾರಣ ಜೈಲಿನಿಂದ ನ್ಯಾಯಾಲಯಕ್ಕೆ ಅಥವಾ ಆಸ್ಪತ್ರೆಗೆ ಸೆರೆವಾಸದಲ್ಲಿರುವವರನ್ನು ಕರೆದೊಯ್ಯಲು ಭದ್ರತಾ ಸಿಬ್ಬಂದಿಗಳ ಕೊರತೆಯಿದೆ ಎಂದು ಹೇಳಲಾಗಿದೆ.

ಜೈಲಿನಲ್ಲಿರುವವರಲ್ಲಿ, ಸುರೇಂದ್ರ ಗ್ಯಾಡ್ಲಿಂಗ್ ಅವರು ನ್ಯಾಯಾಲಯದಲ್ಲಿ ತನ್ನ ಪರ ತಾನೇ ವಾದ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸದಿದ್ದರೆ, ಅವರು ಯಾವುದೇ ಅರ್ಜಿಗಳನ್ನು ಸಲ್ಲಿಸಲು ಅಥವಾ ವಾದ ಮಂಡಿಸಲು ಸಾಧ್ಯವಿಲ್ಲ.

ಕೊನೆಯ ವಿಚಾರಣೆಯಲ್ಲಿ, ಗ್ಯಾಡ್ಲಿಂಗ್ ಮತ್ತು ಇತರರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ವ್ಯಕ್ತಿಗಳನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ಪೊಲೀಸರು ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...