Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...