Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...