Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...