Homeಕರ್ನಾಟಕಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

- Advertisement -
- Advertisement -

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಭಾನುವಾರ (ಮಾ.23) ವರದಿಯಾಗಿತ್ತು. ಆದರೆ, ತಾನು ರಾಜೀನಾಮೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಹೊರಟ್ಟಿ, “ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಆ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕರೆ ಮಾಡಿ ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡವಳಿಕೆ ನನ್ನ ಮನಸ್ಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆಗಳು ಬಂದಿವೆ. ಮಾನಸಿಕ ನೆಮ್ಮದಿ ಹಾಳಾಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

“ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ, ಕಾಲ ಕೆಟ್ಟಿದೆ. ಸದನದ ಗೌರವ ಹೋಗಿ ಬಹಳ ದಿನ ಆಗಿದೆ” ಎಂದಿದ್ದಾರೆ.

“ಚುನಾವಣೆಯಲ್ಲಿ ಸೋಲಿಸೋಕೆ ಆಗದಿದ್ರೆ ಈ ತರ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...