Homeಮುಖಪುಟ'ಬಿಜೆಪಿಗೆ ಮರಳಲ್ಲ' | ಎನ್‌ಸಿಪಿ(ಎಸ್‌ಪಿ) ನಾಯಕ ಏಕನಾಥ್ ಖಡ್ಸೆ ಹೇಳಿಕೆ

‘ಬಿಜೆಪಿಗೆ ಮರಳಲ್ಲ’ | ಎನ್‌ಸಿಪಿ(ಎಸ್‌ಪಿ) ನಾಯಕ ಏಕನಾಥ್ ಖಡ್ಸೆ ಹೇಳಿಕೆ

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿಯ ಮಾಜಿ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಮತ್ತೆ ಪಕ್ಷಕ್ಕೆ ಮರಳುವ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಈ ಬಗ್ಗೆ ಸ್ವತಃ ಏಕನಾಥ್ ಅವರೇ ಪ್ರತಿಕ್ರಿಯಿಸಿದ್ದಾರೆ. “ತಾನು ಮತ್ತೆ ಪಕ್ಷಕ್ಕೆ ಸೇರಲು ಎಂದಿಗೂ ಉತ್ಸುಕನಾಗಿಲ್ಲ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ತಮ್ಮ ಮರು ಸೇರ್ಪಡೆಗೆ ಅಡ್ಡಿಪಡಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪ್ರಸ್ತುತ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಜೊತೆಗೆ ಇರುವ ಏಕನಾಥ್ ಖಡ್ಸೆ ಮತ್ತೆ ಬಿಜೆಪಿಗೆ ಮರಳುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿದ್ದವು. ಅವರ ಸೊಸೆ ರಕ್ಷಾ ಖಡ್ಸೆ ಅವರನ್ನು 2024 ರ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿ ಮರುನಾಮಕರಣ ಮಾಡಿ, ಅವರು ಗೆದ್ದ ನಂತರ ಅವರನ್ನು ಕೇಂದ್ರದ ರಾಜ್ಯ ಸಚಿವರನ್ನಾಗಿ ಮಾಡಿದ ನಂತರ ಈ ಬಗ್ಗೆ ಬಿರುಸಿನ ಚರ್ಚೆ ನಡೆದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಈ ವರ್ಷದ ಆರಂಭದಲ್ಲಿ ಏಕನಾಥ್ ಖಾಡ್ಸೆ ಅವರು ಬಿಜೆಪಿಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರೂ ಅವರ ಮರುಸೇರ್ಪಡೆ ಕುರಿತು ಬಿಜೆಪಿಯಿಂದ ಇನ್ನೂ ಯಾವುದೇ ಘೋಷಣೆಯಾಗಿಲ್ಲ. ಮಂಗಳವಾರ ಪ್ರಾದೇಶಿಕ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಅವರು, ”ನಾನು ಬಿಜೆಪಿ ತೆಕ್ಕೆಗೆ ಮರಳಲು ಉತ್ಸುಕನಾಗಿರಲಿಲ್ಲ, ಆದರೆ ಪಕ್ಷದ ಹಿರಿಯ ನಾಯಕರು ನನ್ನನ್ನು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಬಿಜೆಪಿ ಸೇರಲು ಯಾರು ಅಡ್ಡಿಯಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಂದ್ರ ಫಡ್ನವೀಸ್ ಮತ್ತು ಗಿರೀಶ್ ಮಹಾಜನ್ ತಾನು ಬಿಜೆಪಿಗೆ ಸೇರುವುದಕ್ಕೆ ಅಡ್ಡಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

2023 ರ ಅಕ್ಟೋಬರ್‌ನಲ್ಲಿ ಬಿಜೆಪಿ ತೊರೆದಿದ್ದ ಏಕನಾಥ್ ಖಾಡ್ಸೆ ಅವರು ಆಗಿನ ಅವಿಭಜಿತ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್‌ಸಿಪಿ) ಸೇರಿದ್ದರು. ಈ ವೇಳೆ ಅವರು ಫಡ್ನವೀಸ್ ತಮ್ಮ ರಾಜಕೀಯ ಜೀವನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು

ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್‌ ಅವರ ನಿಕಟವರ್ತಿ ಮಹಾಜನ್ ಅವರು, “ಏಕನಾಥ್ ಖಾಡ್ಸೆ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಎಲ್ಲಾ ಪಕ್ಷಗಳು ಮತ್ತು ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಬಯಸುತ್ತಾರೆ. ಅವರ ಸೊಸೆ ಕೇಂದ್ರ ಸಚಿವರಾಗಿದ್ದಾರೆ. ಆದರೆ ತಮ್ಮ ಮಗಳನ್ನು ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ನಿಂದ ಕಣಕ್ಕಿಳಿಸಲು ಉದ್ದೇಶಿಸಿದ್ದಾರೆ. ವಿರೋಧ ಪಕ್ಷ ಎಂವಿಎ ಸರ್ಕಾರ ರಚಿಸಿದರೆ, ಖಡ್ಸೆ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಬಯಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...