Homeಕರ್ನಾಟಕವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿದೆ.

ಇದಕ್ಕೆ ಸ್ಪಷ್ಟನೆಯನ್ನು ನೀಡಿರುವ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದಾರೆ.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದಾರೆ.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿದ್ದೇವೆ” ಎಂದಿದ್ದಾರೆ.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...