Homeಮುಖಪುಟ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

ನಾವು ಅವರ ಸಿದ್ಧಾಂತದ ವಿರುದ್ಧ, ಅವರ ಆಲೋಚನೆಗಳ ವಿರುದ್ಧ ಹೋರಾಡುತ್ತೇವೆ, ಅವರ ಆಲೋಚನೆಗಳನ್ನು ನಾವು ಸೋಲಿಸುತ್ತೇವೆ -ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ಬಳಸಿದ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಮತ್ತು ಭಾರತೀಯ ಮಾಧ್ಯಮಗಳ ಬಗ್ಗೆ ಮತ್ತೊಂದು ಹೊಸ ವ್ಯಾಖ್ಯಾನ ನೀಡಿ ಬಿಹಾರದ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ

EVM-ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಅಂದ್ರೆ MVM -ಮೋದಿ ವೋಟಿಂಗ್ ಮಷಿನ್ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜೊತೆಗೆ ಎಂವಿಎಂ ಎಂದರೆ, ಮೋದಿಜಿ ಅವರ ಮೀಡಿಯಾ ಎಂದೂ ಹೇಳಿದ್ದಾರೆ.

ಇಂದು ಬಿಹಾರದ ಅರಾರಿಯಾದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿ, “ಅದು ಎಂವಿಎಂ (ಮೋದಿ ವೋಟಿಂಗ್ ಮಷಿನ್) ಅಥವಾ ಮೋದಿ ಜಿ ಕಾ ಮೀಡಿಯಾ (ಮೋದಿಯ ಮಾಧ್ಯಮ) ಆಗಿರಲಿ, ನಾನು ಅವರಿಗೆ ಹೆದರುವುದಿಲ್ಲ.  ಸತ್ಯವೇ ಸತ್ಯ, ನ್ಯಾಯವೇ ನ್ಯಾಯ” ಎಂದಿದ್ದಾರೆ.

’ನಾನು ಅವರ ಸಿದ್ಧಾಂತದ ವಿರುದ್ಧ ಯುದ್ಧವನ್ನು ಮಾಡುತ್ತಿದ್ದೇನೆ. ನಾವು ಅವರ ಆಲೋಚನೆಗಳ ವಿರುದ್ಧ ಹೋರಾಡುತ್ತೇವೆ, ಅವರ ಆಲೋಚನೆಗಳನ್ನು ನಾವು ಸೋಲಿಸುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

2019 ರಲ್ಲಿ ಕೂಡ ರಾಹುಲ್ ಗಾಂಧಿ ಇವಿಎಂ ದುರುಪಯೋಗದ ಬಗ್ಗೆ ಆರೋಪಿಸಿದ್ದರು. ಜೊತೆಗೆ ಚುನಾವಣಾ ಆಯೋಗವು ಮೋದಿ ಮತ್ತು ಅವರ ಗ್ಯಾಂಗ್‌ಗೆ ಮೋದಲೇ ಶರಣಾಗಿತ್ತು ಎಂದಿದ್ದರು.

ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, “ನರೇಂದ್ರ ಮೋದಿ ಅವರು ತಮ್ಮ ಸಭೆಗಳಲ್ಲಿ ನನ್ನ ಬಗ್ಗೆ ಅಹಿತಕರ ಸಂಗತಿಗಳನ್ನು ಹೇಳುತ್ತಾರೆ. ಹೆಚ್ಚು ದ್ವೇಷವನ್ನು ಹರಡಲು ಅವರು ಪ್ರಯತ್ನಿಸುತ್ತಾರೆ. ಆದರೆ, ನಾನು ಯಾವಾಗಲೂ ಪ್ರೀತಿಯನ್ನು ಹರಡಲು ಪ್ರಯತ್ನಿಸುತ್ತೇನೆ. ದ್ವೇಷದಿಂದ ದ್ವೇಷವನ್ನು ಸೋಲಿಸಲು ಸಾಧ್ಯವಿಲ್ಲ, ಬದಲಿಗೆ ಪ್ರೀತಿಯಿಂದ ಮಾತ್ರ ಸಾಧ್ಯ” ಎಂದಿದ್ದಾರೆ.

“ಇಂದು ಯುವಕರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಾರ್ವಜನಿಕ ಸಭೆಗಳಲ್ಲಿ ಅವರೇ ಭರವಸೆ ನೀಡಿದ್ದ ಉದ್ಯೋಗಗಳ ಬಗ್ಗೆ ಕೇಳಿದರೆ ಅವರು ಬೆದರಿಕೆ ಹಾಕುತ್ತಾರೆ. ಯುವಜನತೆಯನ್ನು ಸ್ಥಳದಿಂದ ಓಡಿಸುತ್ತಾರೆ ಮತ್ತು ಅವರ ಮೇಲೆ ಹಲ್ಲೆ ನಡೆಸುತ್ತಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ನಿನ್ನೆ(ನ.3) ಮಧುಬನಿ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಲ್ಲು ಮತ್ತು ಈರುಳ್ಳಿ ಎಸೆದು ಅಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿತ್ತು.


ಇದನ್ನೂ ಓದಿ: ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...